ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.
ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.
ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.
ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.
ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.
ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು
ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.
`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.
`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.
ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.
ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.
ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.
ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.
ಕೃಪೆ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…