ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

ಈ ಪೈಕಿ ಜೀವಸತ್ವ ‘ಎ’ ಹಾಲು, ಬೆಣ್ಣೆ, ಕೆನೆ, ಮೊಟ್ಟೆಯ ಹಳದಿ, ಹಸಿರು ಮತ್ತು ಹಳದಿ/ಕೇಸರಿ ಬಣ್ಣದ ಹಣ್ಣು, ತರಕಾರಿಗಳಾದ ಕ್ಯಾರೆಟ್, ಮಾವು, ಪಪ್ಪಾಯಿ, ಕುಂಬಳಕಾಯಿಯಲ್ಲಿ ಹೇರಳವಾಗಿದ್ದು ನಮ್ಮ ಕಣ್ಣಿನ ಆರೋಗ್ಯಕ್ಕೆ ಅತ್ಯವಶ್ಯ. ಕಣ್ಣಿನ ದೃಷ್ಟಿ ಬಲಗೊಳ್ಳಲು, ಕತ್ತಲು ಮತ್ತು ಬೆಳಕಿನಲ್ಲಿ ದೃಷ್ಟಿಯ ಸಮತೋಲನ ಕಾಪಾಡಲು ಚರ್ಮದ ಮೇಲ್ಮೈ ಆರೋಗ್ಯಕರವಾಗಿ ಕಾಂತಿಯುಕ್ತವಾಗಿರಲು, ಗಂಡಸರಲ್ಲಿ ಆರೋಗ್ಯಪೂರ್ಣ ವೀರ್ಯ ಉತ್ಪಾದನೆಯಾಗಲು ಮತ್ತು ಅನ್ನನಾಳ, ವಾಯುನಾಳ, ಮೂತ್ರನಾಳಗಳ ಆರೋಗ್ಯ ಕಾಪಾಡಲು ‘ಎ’ ಜೀವಸತ್ವ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ‘ಇ’ ಸೊಪ್ಪು, ಕಾಯಿ/ಬೀಜ, ತರಕಾರಿ, ಅಡುಗೆ ಎಣ್ಣೆ, ಮೊಟ್ಟೆಯಲ್ಲಿ ಹೇರಳವಾಗಿದೆ. ನಮ್ಮ ದೇಹದಲ್ಲಿ ನಡೆಯುವ ಹಲವಾರು ಪರಿವರ್ತನಾ ಕ್ರಿಯೆಗಳಿಂದ ಉತ್ಪತ್ತಿಯಾಗುವ ವಿಷಕಾರಿ ಅಂಶಗಳು ಜೀವಕಣಗಳಿಗೆ ಹಾನಿಮಾಡಿ ಕ್ಯಾನ್ಸರ್ ಮತ್ತಿತರ ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ‘ಇ’ ಜೀವಸತ್ವ ಎಲ್ಲ ಜೀವಕಣ ಮತ್ತು ಅಂಗಗಳನ್ನು ಈ ವಿಷಕಾರಿ ಅಂಶಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ದೃಢಪಟ್ಟಿದೆ.

ಇನ್ನು ನೀರಿನಲ್ಲಿ ಕರಗುವ ಜೀವಸತ್ವಗಳ ಗುಂಪಿನಲ್ಲಿ ‘ಬಿ’ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ವಿವಿಧ ಜೀವಸತ್ವಗಳಿವೆ. ಈ ಪೈಕಿ ಜೀವಸತ್ವ ‘ಬಿ1’ ಪಾಲಿಷ್ ಮಾಡದ ಅಕ್ಕಿ, ಕಾಳುಗಳಲ್ಲಿ ಯಥೇಚ್ಚವಾಗಿದ್ದು, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅತಿ ಮುಖ್ಯ ಪಾತ್ರ ವಹಿಸುತ್ತದೆ.

ಇನ್ನು ಮೊಟ್ಟೆ, ಮಾಂಸ, ಕಾಳು ಮತ್ತು ಹಾಲಿನಲ್ಲಿ ಹೇರಳವಾಗಿರುವ ‘ಬಿ2’ ಜೀವಸತ್ವ, ನಮ್ಮ ಆಹಾರದಲ್ಲಿನ ಕಾರ್ಬೋಹೈಡ್ರೇಟ್ ಮತ್ತು ಕೊಬ್ಬಿನ ಅಂಶ ಶಕ್ತಿಯಾಗಿ ಪರಿರ್ತನೆಗೊಳ್ಳಲು ಅತ್ಯವಶ್ಯ. ಈ ಜೀವಸತ್ವದ ಕೊರತೆಯುಂಟಾದಾಗ ಬಾಯಿ, ತುಟಿ, ನಾಲಗೆಯಲ್ಲಿ ಹುಣ್ಣುಗಳಾಗುತ್ತವೆ ಮತ್ತು ರೋಗಿಗಳು ಚರ್ಮಕ್ಕೆ ಸಬಂಧಪಟ್ಟ ಕಾಯಿಲೆಗಳಿಂದಲೂ ನರಳುತ್ತಾರೆ. ಜೀವಸತ್ವ ‘ಬಿ3’ ಬೇಳೆಕಾಳು, ಧಾನ್ಯಗಳು, ಹಾಲು, ಮಾಂಸದಲ್ಲಿ ಹೇರಳವಾಗಿದ್ದು; ಆಹಾರದಲ್ಲಿನ ಕಾರ್ಬೋಹೈಡ್ರೇಟ್, ಕೊಬ್ಬು ಮತ್ತು ಪ್ರೋಟೀನ್ಗಳ ಪರಿವರ್ತನೆಗೆ ಸಹಕಾರಿ. ‘ಬಿ3’ ಜೀವಸತ್ವದ ಕೊರತೆಯಾದಾಗ ಪರಿವರ್ತನಾ ಕಾರ್ಯಗಳಿಗೆ ಧಕ್ಕೆಯುಂಟಾಗಿ, ದೇಹದಲ್ಲಿ ಶಕ್ತಿಯ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಪರಿಣಾಮ ರೋಗಿಗಳು ಚರ್ಮ, ನರಮಂಡಲ ಮತ್ತು ಜೀರ್ಣಕ್ರಿಯೆಗೆ ಸಂಬಂಧಪಟ್ಟ ಕಾಯಿಲೆಗಳಿಂದ ನರಳುತ್ತಾರೆ.

ಬಯೊಟಿನ್ ಜೀವಸತ್ವವು ಕಾಳು, ಬೀಜ ಮತ್ತು ಮೊಟ್ಟೆಯಲ್ಲಿ ಹೇರಳವಾಗಿದ್ದು; ಇದು ಆಹಾರದಲ್ಲಿನ ಕೊಬ್ಬು ಮತ್ತು ಅಂಗಾರಕ ವನ್ನು ಶಕ್ತಿಯನ್ನಾಗಿ ಪರಿವರ್ತಿಸಲು ಅವಶ್ಯ. ಬಯೊಟಿನ್ನ ಕೊರತೆಯುಂಟಾದಾಗ ತುಟಿ, ನಾಲಗೆ, ಚರ್ಮಕ್ಕೆ ಸಂಬಂಧಪಟ್ಟ ಕಾಯಿಲೆಗಳು ತಲೆ ದೋರುತ್ತವೆ ಮತ್ತು ರೋಗಿಗಳು ಮಾಂಸಖಂಡಗಳ ನೋವು, ಅಜೀರ್ಣ, ಖಿನ್ನತೆಯಿಂದ ನರಳುತ್ತಾರೆ. ಹಸಿರು ತರಕಾರಿ, ಸೊಪ್ಪು, ಕಾಳುಗಳಲ್ಲಿ ಹೇರಳವಾಗಿರುವ ಫೋಲಿಕ್ ಆಮ್ಲವು ರಕ್ತಕಣಗಳು ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ಜೀವಸತ್ವ ಬಿ12 ಮೊಟ್ಟೆ, ಮಾಂಸ ಮತ್ತು ಹಾಲಿನಲ್ಲಿ ಹೇರಳವಾಗಿದ್ದು, ರಕ್ತಕಣ ಮತ್ತು ನರಗಳ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೊರತೆಯುಂಟಾದರೆ ರಕ್ತಹೀನತೆ, ಕೈ-ಕಾಲು ಅದರಲ್ಲೂ ಅಂಗೈ-ಪಾದಗಳಲ್ಲಿ ಜೋಮು ಹಿಡಿಯುವುದು, ಸ್ಪರ್ಶಹೀನತೆ, ನರಗಳ ದೌರ್ಬಲ್ಯ, ವಿಪರೀತ ಕಿರಿಕಿರಿಯಿಂದ ರೋಗಿಗಳು ನರಳುತ್ತಾರೆ. ಜೀವಸತ್ವ ‘ಸಿ’ ಟೊಮೆಟೊ, ಬೆಟ್ಟದ ನೆಲ್ಲಿ, ಕಿವಿಹಣ್ಣು, ಇನ್ನಿತರ ಹುಳಿ ಹಣ್ಣು ಮತ್ತು ತರಕಾರಿಗಳಲ್ಲಿ ಹೇರಳವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…