ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..

ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.

ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.

ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.

ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.

ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…