News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

33

– ಮಯೂನ್ ಎನ್

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-

(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.

(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್‌ನಲ್ಲಿ ಮಾತನಾಡಲು ಸಾಧ್ಯ

(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.

ಪರಿಹಾರ

ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.

ವಿಳಾಸ: ಮಯೂನ್ ಎನ್

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…