News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

33

– ಮಯೂನ್ ಎನ್

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-

(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.

(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್‌ನಲ್ಲಿ ಮಾತನಾಡಲು ಸಾಧ್ಯ

(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.

ಪರಿಹಾರ

ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.

ವಿಳಾಸ: ಮಯೂನ್ ಎನ್

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…