ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-
(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.
(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್ನಲ್ಲಿ ಮಾತನಾಡಲು ಸಾಧ್ಯ
(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.
ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.
(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.
ವಿಳಾಸ: ಮಯೂನ್ ಎನ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????