News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

29

– ಮಯೂನ್ ಎನ್

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-

(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.

(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್‌ನಲ್ಲಿ ಮಾತನಾಡಲು ಸಾಧ್ಯ

(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.

ಪರಿಹಾರ

ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.

ವಿಳಾಸ: ಮಯೂನ್ ಎನ್

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…