News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

29

– ಮಯೂನ್ ಎನ್

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-

(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.

(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್‌ನಲ್ಲಿ ಮಾತನಾಡಲು ಸಾಧ್ಯ

(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.

ಪರಿಹಾರ

ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.

ವಿಳಾಸ: ಮಯೂನ್ ಎನ್

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…