News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

29

– ಮಯೂನ್ ಎನ್

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-

(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.

(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್‌ನಲ್ಲಿ ಮಾತನಾಡಲು ಸಾಧ್ಯ

(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.

ಪರಿಹಾರ

ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.

ವಿಳಾಸ: ಮಯೂನ್ ಎನ್

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….