News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

34

– ಮಯೂನ್ ಎನ್

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-

(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.

(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್‌ನಲ್ಲಿ ಮಾತನಾಡಲು ಸಾಧ್ಯ

(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.

ಪರಿಹಾರ

ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.

(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.

ವಿಳಾಸ: ಮಯೂನ್ ಎನ್

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…