ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ ಭಾರತೀಯರು ಹೇಳುತ್ತಾರೆ. ಅನೇಕ ರೀತಿಯ ಮಾನಸಿಕ ಒತ್ತಡಗಳು ಅವರನ್ನೂ ಕಾಡುತ್ತವೆ. ಉದಾಹರಣೆಗೆ-
(೧) ಸಾಂಸ್ಕೃತಿಕ ಗೊಂದಲ (culture Shock): ಪ್ರಾರಂಭದಲ್ಲಿ ಪಾಶ್ಚಿಮಾತ್ಯ ಜೀವನಶೈಲಿ, ಸುಖನೀಡುವ ವಿವಿಧ ಸಲಕರಣೆಗಳು, ವ್ಯವಸ್ಥಿತ ಸಮಾಜವನ್ನು ಬೆರಗುಗಣ್ಣಿನಿಂದ ನೋಡಿ, ನಮ್ಮ ಭಾರತದ ಅವ್ಯವಸ್ಥೆಗೆ ಹೋಲಿಸಿದರೆ, ಈ ನಾಡು ಸ್ವರ್ಗ ಎಂದು ಭಾವಿಸಿ ಖುಷಿ ಪಡುವ ಭಾರತೀಯರು, ಕ್ರಮೇಣ ತಮ್ಮ ಸಂಸ್ಕೃತಿಗೂ ಈ ಸಂಸ್ಕೃತಿಗೂ ಇರುವ ಅನೇಕ ವ್ಯತ್ಯಾಸಗಳನ್ನು ಅರಗಿಸಿಕೊಳ್ಳಲಾರರು. ವಿಪರೀತ ಸ್ಫರ್ಧೆ, ಅಮಾನವೀಯ ಸಂಬಂಧಗಳು, ಎಲ್ಲವನ್ನೂ ಹಣದಿಂದಲೇ ಅಳೆಯುವ ಪ್ರವೃತ್ತಿ, ಭಾವನಾತ್ಮಕ ಸಂಬಂಧಗಳ ಅಭಾವ ಕ್ರಮೇಣ ದೊಡ್ಡ ಕೊರತೆಯನ್ನುಂಟುಮಾಡುತ್ತದೆ. ತಮ್ಮ ಮಕ್ಕಳು ಅಲ್ಲಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಅಥವಾ ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕೇ ಎಂದು ನಿರ್ಧರಿಸಲಾರರು. ಯಾವುದೇ ದೇಶದ ಸ್ಥಳೀಯರು, ವಿದೇಶೀಯರನ್ನು ತಮ್ಮವರು ಎಂದು ಪೂರ್ಣವಾಗಿ ಒಪ್ಪಿಕೊಳ್ಳರು. ಸ್ವಲ್ಪ ಮಟ್ಟಿನ ಅಪನಂಬಿಕೆ, ಅವಿಶ್ವಾಸ, ಮತ್ಸರವನ್ನೂ ತೋರಿಸಿಯೇ ತೋರಿಸುತ್ತಾರೆ. ಮುಕ್ತ ಮನಸ್ಸಿನಿಂದ ಬೆರೆಯುವುದಿಲ್ಲ. ಹೀಗಾಗಿ ಅನೇಕ ಭಾರತೀಯರು ಸ್ಥಳೀಯರಿಗೆ ಪರಕೀಯರಾಗಿಯೇ ಉಳಿಯುತ್ತಾರೆ. ಇಲ್ಲವೇ ಹೆಚ್ಚು ಹೆಚ್ಚಾಗಿ ಭಾರತೀಯರೊಂದಿಗೇ ಒಡನಾಡಲು ಇಷ್ಟಪಟ್ಟು, ಸ್ಥಳೀಯರಿಂದ ಮತ್ತಷ್ಟು ದೂರವಾಗುತ್ತಾರೆ. ತಮ್ಮ ಸಂಸ್ಕೃತಿಯನ್ನೂ, ವಿದೇಶದ ಸಂಸ್ಕೃತಿಯನ್ನೂ ತುಲನೆ ಮಾಡುತ್ತಾ, ಯಾವುದು ಸರಿ ಎಂದು ನಿರ್ಧರಿಸಲಾಗದೇ ಗೊಂದಲಕ್ಕೀಡಾಗುತ್ತಾರೆ.
(೨) ಒಂಟಿತನದ ಭಾವನೆ: ಕೆಲಸಕ್ಕೆ ಹೋಗದವರಲ್ಲಿ, ಒಂಟಿತನದ ಭಾವನೆ ಹೆಚ್ಚು. ಮನೆಯಲ್ಲಿ ಮನೆಗೆಲಸ ಮುಗಿಸಿ, ಬಿಡುವಿನ ವೇಳೆಯನ್ನು ಹೇಗೆ ಕಳೆಯುವುದೆನ್ನುವುದು ವಿದೇಶದಲ್ಲಿರುವ ಭಾರತೀಯ ಗೃಹಿಣಿಯರಿಗೆ ಒಂದು ದೊಡ್ಡ ಸಮಸ್ಯೆ. ಟಿವಿ ನೋಡುವುದು, ವೀಡಿಯೋ ಗೇಮ್ಸ್ ಆಡುವುದು, ಓದುವುದು, ಶಾಪಿಂಗ್ ಹೋಗುವುದು ಬೇಸರವಾಗತೊಡಗುತ್ತದೆ. ಹಾಗೆಯೇ ಸ್ನೇಹಿತರೊಂದಿಗೆ, ಪರಿಚಯದವರೊಂದಿಗೆ ಎಷ್ಟು ಹೊತ್ತು ಫೋನ್ನಲ್ಲಿ ಮಾತನಾಡಲು ಸಾಧ್ಯ
(೩) ತಮ್ಮ ಮತ್ತು ಮಕ್ಕಳ ಭವಿಷ್ಯ: ದುಡಿಯುವ ಅವಧಿಯಲ್ಲಿ ನಾವೇನೋ ಇಲ್ಲಿದ್ದೇವೆ, ದುಡಿಯುತ್ತೇವೆ, ಸುಖಪಡುತ್ತೇವೆ, ಹಣ ಸಂಪತ್ತನ್ನೂ ಗಳಿಸುತ್ತೇವೆ. ಆದರೆ ದೇಶ ನಮ್ಮ ದೇಶವಾಗಲು ಸಾಧ್ಯವಿಲ್ಲ. ನಮ್ಮ ಮಕ್ಕಳು ಇಲ್ಲೇ ಇದ್ದು, ಈ ದೇಶದ ನಾಗರೀಕರಾಗಬೇಕೆ, ಸ್ಥಳೀಯರ ಜೊತೆಗೆ ಮದುವೆ ಸಂಬಂಧ ಬೆಳೆಸಬೇಕೇ, ವಾಪಾಸ್ ಭಾರತಕ್ಕೆ ಹೋಗಿಬಿಡೋಣವೇ. ಅಲ್ಲಿ ಹೋಗಿ ಏನು ಮಾಡುವುದು. ಅಲ್ಲಿನ ಜೀವನ ಶೈಲಿಗೆ ಹೊಂದಿಕೊಳ್ಳಲು ಸಾಧ್ಯವೇ. ನಾವು ತ್ರಿಶಂಕು ಸ್ಥಿತಿಗೆ ಒಳಗಾದೆವಲ್ಲ. ಇಲ್ಲಿಯೂ ಸಲ್ಲುವುದಿಲ್ಲ ಅಲ್ಲಿಯೂ (ಭಾರತದಲ್ಲಿ) ಸಲ್ಲುವುದಿಲ್ಲ. ತಮ್ಮ ಭವಿಷ್ಯವೇನು -ಈ ಅನಾಥ ಪ್ರಜ್ಞೆ ಹಲವರನ್ನು ಕಾಡತೊಡಗುತ್ತದೆ.

(೪) ಅಗತ್ಯಗಳಿಗೆ ಗುಲಾಮನಾಗುವುದು: ಗ್ರಾಹಕ ಸಂಸ್ಕೃತಿಯಲ್ಲಿ ಅಗತ್ಯಗಳಿಗೆ ಕೊನೆಯೇ ಇಲ್ಲ. ಇಷ್ಟಿದ್ದರೆ ಮತ್ತಷ್ಟು ಬೇಕು, ಮತ್ತಷ್ಟು ಸಿಕ್ಕಿದರೆ, ಇನ್ನಷ್ಟು ಬೇಕು. ಬೇಕುಗಳ ಪೂರೈಕೆ ಆಗದಿದ್ದರೆ, ಎಲ್ಲವನ್ನೂ ಕಳೆದುಕೊಂಡಂತಹ ಅನುಭವ, ತೃಪ್ತಿಯೇ ಇಲ್ಲ. ದೇಹಕ್ಕೆ ನಾವು ಸುಖ ಕೊಟ್ಟಷ್ಟು, ಅದು ಮತ್ತಷ್ಟು ಬೇಕು ಎನ್ನುತ್ತದೆ. ದೇಹ ಸೋಮಾರಿಯಾಗುತ್ತದೆ. ಬೊಜ್ಜು ಬೆಳೆಯುತ್ತದೆ. ಮನಸ್ಸು ಸದಾ ವಿಷಯ ಸುಖಗಳನ್ನಷ್ಟೇ ಬಯಸುತ್ತದೆ. ಹೀಗಾಗಿ ಮನಸ್ಥೈರ್ಯ ಕುಗ್ಗುತ್ತದೆ. ಆತ್ಮ ವಿಶ್ವಾಸ ತಗ್ಗುತ್ತದೆ. ಅಗತ್ಯಗಳ ಪೂರೈಕೆಗಾಗಿ ಚಡಪಡಿಸುತ್ತಾ, ಸದಾ ಒತ್ತಡದಲ್ಲಿದ್ದು, ಮೈ ಮನಸ್ಸುಗಳು ದುರ್ಬಲವಾಗತೊಡಗುತ್ತವೆ. ಪರಿಣಾಮ, ಮನೋದೈಹಿಕ ಬೇನೆಗಳು, ಖಿನ್ನತೆ, ಆತಂಕದಂತಹ ಮನೋಬೇನೆಗಳು, ಮದ್ಯಪಾನ ಮಾದಕ ವಸ್ತುಗಳ ದುರ್ಬಳಕೆ, ಅಪರಾಧ, ಆತ್ಮಹತ್ಯಾ ಪ್ರವೃತ್ತಿಗಳು ವಿದೇಶದಲ್ಲಿರುವ ಭಾರತೀಯರನ್ನು ಹೆಚ್ಚಾಗಿ ಕಾಡುತ್ತವೆ. ಚಿಕ್ಕವಯಸ್ಸಿನಲ್ಲೇ ಹೃಧಯಾಘಾತ, ಪಾರ್ಶ್ವವಾಯು, ಸಿಹಿಮೂತ್ರ ರೋಗ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಹೆಚ್ಚು ಸಾಮಾನ್ಯವಾಗುತ್ತಿದೆ.
ವಿದೇಶಗಳಲ್ಲಿರುವ ಭಾರತೀಯರು ತಮ್ಮ ಧೋರಣೆ, ಜೀವನಶೈಲಿಯಲ್ಲಿ ಕೆಲವು ಮಾರ್ಪಾಟುಗಳನ್ನು ಮಾಡಿಕೊಂಡರೆ, ಒತ್ತಡದ ದುಷ್ಪರಿಣಾಮಗಳನ್ನೂ ತಗ್ಗಿಸಬಹುದು. ತಮ್ಮ ಮೈಮನಸ್ಸುಗಳ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು.
(೧) ಆಸೆ-ಅಗತ್ಯಗಳನ್ನು ತಗ್ಗಿಸಿ, ಸರಳ ಜೀವನ ಶೈಲಿಯನ್ನು ರೂಢಿಸಿಕೊಳ್ಳವುದು. ಹಣ-ವಸ್ತುಗಳ ಸಂಪಾದನೆಯೇ ಜೀವನದ ಗುರಿಯಾಗಬಾರದು.
(೨) ಹಿತ ಮಿತ ಆಹಾರ ಸೇವನೆ: ಆದಷ್ಟು ನೈಸರ್ಗಿಕ ಆಹಾರವನ್ನು ಸೇವಿಸುವುದು. ಸಿಹಿ, ಕೊಬ್ಬು, ಸಿದ್ಧ ಪಡಿಸಿದ ಆಹಾರಗಳನ್ನೂ ಸೇವಿಸಬಾರದು.
(೩) ದಿನ ನಿತ್ಯ ವ್ಯಾಯಾಮ
(೪) ಸೃಜನಶೀಲ ಚಟುವಟಿಕೆಗಳು: ಸಾಹಿತ್ಯ, ಕಲೆ, ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗುವುದು.
(೫) ಕಷ್ಟ ಸುಖ -ನೋವು ನಲಿವುಗಳನ್ನೂ ಆತ್ಮೀಯರಲ್ಲಿ ಹೇಳಿಕೊಳ್ಳುವುದು.
(೬) ಪ್ರಕೃತಿಯೊಂದಿಗೆ ಆದಷ್ಟು ಸಮೀಪದಲ್ಲಿರುವುದು. ಗಿಡ ಮರ ನದಿ ಬೆಟ್ಟಗಳಿರುವ ಸ್ಥಳಗಳಿಗೆ ಆಗಾಗ ಭೇಟಿಕೊಡುವುದು.
(೭) ಯೋಗ, ಧ್ಯಾನ, ಧಾರ್ಮಿಕ ಚಟುವಟಿಕೆಗಳು, ಧಾರ್ಮಿಕ ಗ್ರಂಥಗಳ ಪಠಣ, ಆಧ್ಯಾತ್ಮಿಕ ಚಿಂತನೆ.
(೮) ದಾನ, ಧರ್ಮ ಪರೋಪಕಾರದಂತಹ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗುವುದು.
ವಿಳಾಸ: ಮಯೂನ್ ಎನ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ