ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.
ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.
ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?
ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.
ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.
ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.
ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.
ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.
ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.
ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.
ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.
ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…