ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.
ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.
ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.
ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.
ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?
ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.
ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.
ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.
ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.
ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.
ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.
ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.
ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.
ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.
ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.
ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…