ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…