News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ವಿಶ್ವದ ಎಲ್ಲಾ ಕನ್ನಡಿಗರಿಗೆ ಮನರಂಜನೆ ನೀಡುತ್ತಿದ್ದ “ಮಜಾ ಟಾಕೀಸ್”ಬಂದ್ ಆಗಲಿದೆಯಾ?ಇದು ನಿಜನಾ?ತಿಳಿಯಲು ಈ ಲೇಖನ ಓದಿ…

902

ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್‌ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್‌ ಸೂಪರ್ಸ್‌ನ ಫೇಸ್‌ ಬುಕ್‌ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್‌ಗಳ ಸುರಿಮಳೆಯಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…