ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.
ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.
2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.
ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.
ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…