ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…