News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ವಿಶ್ವಾಸ ಮತ್ತು ಭರವಸೆ ಇದೆ ಜೀವನದಲ್ಲಿ

189

ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….

ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….

ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……

ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……

ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………

ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……

ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.

ಹೀಗೆ ಸಾಗುತ್ತಲೇ ಇದೆ ಬದುಕು……

ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…