ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………
ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…
ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..
ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…