ಉಪಯುಕ್ತ ಮಾಹಿತಿ, ತಂತ್ರಜ್ಞಾನ

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

150

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್‌ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್‌ ಮೂಲಕವೇ ಮಾಡಬಹುದಾಗಿದೆ.


ಎಂಜಿನಿಯರಿಂಗ್‌, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫ‌ಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್‌ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್‌ ರೂಪ ನೀಡಲಾಯಿತು.  ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.   ಹೀಗಾಗಿಯೇ  ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್‌ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್‌ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ.  ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಬದಲಾವಣೆ:-
ಸಿಇಟಿ ಸಾಫ್ಟ್ವೇರ್‌ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್‌ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬಹುದಾಗಿದೆ .

ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್‌ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್‌ಗಳ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್‌ನಲ್ಲೇ ಮಾಡಬಹುದು ಮತ್ತು  ಸೀಟು ಹಂಚಿಕೆಯ ಫ‌ಲಿತಾಂಶವನ್ನು ಮೊಬೈಲ್‌ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್‌ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್‌ ಫೋನ್‌ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್‌ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡುತ್ತಿದ್ದಾರೆ.

ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್‌ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್‌ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್‌ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ