News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ತಂತ್ರಜ್ಞಾನ

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

154

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್‌ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್‌ ಮೂಲಕವೇ ಮಾಡಬಹುದಾಗಿದೆ.


ಎಂಜಿನಿಯರಿಂಗ್‌, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫ‌ಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್‌ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್‌ ರೂಪ ನೀಡಲಾಯಿತು.  ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.   ಹೀಗಾಗಿಯೇ  ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್‌ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್‌ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ.  ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಬದಲಾವಣೆ:-
ಸಿಇಟಿ ಸಾಫ್ಟ್ವೇರ್‌ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್‌ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬಹುದಾಗಿದೆ .

ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್‌ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್‌ಗಳ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್‌ನಲ್ಲೇ ಮಾಡಬಹುದು ಮತ್ತು  ಸೀಟು ಹಂಚಿಕೆಯ ಫ‌ಲಿತಾಂಶವನ್ನು ಮೊಬೈಲ್‌ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್‌ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್‌ ಫೋನ್‌ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್‌ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡುತ್ತಿದ್ದಾರೆ.

ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್‌ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್‌ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್‌ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…