News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ತಂತ್ರಜ್ಞಾನ

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

152

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್‌ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್‌ ಮೂಲಕವೇ ಮಾಡಬಹುದಾಗಿದೆ.


ಎಂಜಿನಿಯರಿಂಗ್‌, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫ‌ಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್‌ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್‌ ರೂಪ ನೀಡಲಾಯಿತು.  ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.   ಹೀಗಾಗಿಯೇ  ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್‌ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್‌ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ.  ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಬದಲಾವಣೆ:-
ಸಿಇಟಿ ಸಾಫ್ಟ್ವೇರ್‌ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್‌ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬಹುದಾಗಿದೆ .

ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್‌ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್‌ಗಳ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್‌ನಲ್ಲೇ ಮಾಡಬಹುದು ಮತ್ತು  ಸೀಟು ಹಂಚಿಕೆಯ ಫ‌ಲಿತಾಂಶವನ್ನು ಮೊಬೈಲ್‌ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್‌ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್‌ ಫೋನ್‌ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್‌ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡುತ್ತಿದ್ದಾರೆ.

ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್‌ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್‌ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್‌ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…