ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…