ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…