ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು. ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ. ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.
ಸಾಫ್ಟ್ವೇರ್ ಬದಲಾವಣೆ:-
ಸಿಇಟಿ ಸಾಫ್ಟ್ವೇರ್ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್ಲೋಡ್ ಮಾಡಬಹುದಾಗಿದೆ .
ಮೊಬೈಲ್ ಲಿಂಕ್ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್ಗಳ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್ನಲ್ಲೇ ಮಾಡಬಹುದು ಮತ್ತು ಸೀಟು ಹಂಚಿಕೆಯ ಫಲಿತಾಂಶವನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್ ಫೋನ್ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್ಗೆ ಮೊಬೈಲ್ ಲಿಂಕ್ ಮಾಡುತ್ತಿದ್ದಾರೆ.
ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…