ಉಪಯುಕ್ತ ಮಾಹಿತಿ, ತಂತ್ರಜ್ಞಾನ

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

146

ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್‌ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್‌ ಮೂಲಕವೇ ಮಾಡಬಹುದಾಗಿದೆ.


ಎಂಜಿನಿಯರಿಂಗ್‌, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫ‌ಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್‌ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ.ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ. 2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್‌ ರೂಪ ನೀಡಲಾಯಿತು.  ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು.

ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.   ಹೀಗಾಗಿಯೇ  ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್‌ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್‌ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ.  ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಬದಲಾವಣೆ:-
ಸಿಇಟಿ ಸಾಫ್ಟ್ವೇರ್‌ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ.

ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್‌ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬಹುದಾಗಿದೆ .

ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ:-
ಹೊಸ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್‌ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್‌ಗಳ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್‌ನಲ್ಲೇ ಮಾಡಬಹುದು ಮತ್ತು  ಸೀಟು ಹಂಚಿಕೆಯ ಫ‌ಲಿತಾಂಶವನ್ನು ಮೊಬೈಲ್‌ ಮೂಲಕವೇ ತಿಳಿದುಕೊಳ್ಳಬಹುದು.

ಲಾಗಿನ್‌ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್‌ ಫೋನ್‌ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್‌ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡುತ್ತಿದ್ದಾರೆ.

ಹೊಸ ಅಭ್ಯರ್ಥಿಗಳು :-
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್‌ ಕಾರ್ಯಕ್ರಮ ನಡೆಸಲಾಗುತ್ತದೆ.

ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್‌ ಕೂಡ ನೀಡಲಾಗುತ್ತದೆ.ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್‌ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ವಿಚಿತ್ರ ಆದರೂ ಸತ್ಯ

    ಈ 2 ವರ್ಷದ ಪುಟ್ಟ ಬಾಲಕಿಗೆ ಹಾವೇ ಫ್ರೆಂಡ್ಸ್..!ತಿಳಿಯಲು ಈ ಲೇಖನ ಓದಿ..

    ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಯನ್ನು ನೆನೆಯುತ್ತಾ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಉಪಯುಕ್ತ ಮಾಹಿತಿ

    ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

    ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…