ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.
ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.
ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.
ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.
ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.
ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.
ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…