ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.
ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.
ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.
ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.
ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.
ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.
ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…