India, Place, tourism

ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

350

ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್ ಫೆಸೆಂಟ್ ಮತ್ತು ಇತರ ಎತ್ತರದ ಪಕ್ಷಿಗಳು ಸೇರಿವೆ.  ಸಮುದ್ರ ಮಟ್ಟದಿಂದ 3352 ರಿಂದ 3658 ಮೀಟರ್ ಎತ್ತರದಲ್ಲಿ, ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನದ ಸೌಮ್ಯ ಭೂದೃಶ್ಯವು ಪೂರ್ವಕ್ಕೆ ನಂದಾ ದೇವಿ ರಾಷ್ಟ್ರೀಯ ಉದ್ಯಾನದ ಒರಟಾದ ಪರ್ವತ ಅರಣ್ಯವನ್ನು ಪೂರೈಸುತ್ತದೆ. ಗ್ರೇಟ್ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಒಂದು ವಿಶಿಷ್ಟ ಪರಿವರ್ತನಾ ವಲಯವನ್ನು ಒಳಗೊಂಡಿದೆ. ಈ ಉದ್ಯಾನವನವು 87.50 ಕಿಮೀ 2 ವಿಸ್ತಾರದಲ್ಲಿದೆ ಮತ್ತು ಇದು ಸುಮಾರು 8 ಕಿ.ಮೀ ಉದ್ದ ಮತ್ತು 2 ಕಿ.ಮೀ ಅಗಲವಿದೆ. ಉದ್ಯಾನವು ಸಂಪೂರ್ಣವಾಗಿ ಸಮಶೀತೋಷ್ಣ ಆಲ್ಪೈನ್ ವಲಯದಲ್ಲಿದೆ. ಎರಡೂ ಉದ್ಯಾನವನಗಳು ನಂದಾ ದೇವಿ ಬಯೋಸ್ಫಿಯರ್ ರಿಸರ್ವ್ (223,674 ಹೆಕ್ಟೇರ್) ನಲ್ಲಿ ಆವರಿಸಲ್ಪಟ್ಟಿವೆ, ಇದು ಬಫರ್ ವಲಯದಿಂದ (5,148.57 ಕಿಮಿ 2) ಮತ್ತಷ್ಟು ಸುತ್ತುವರೆದಿದೆ ನಂದಾ ದೇವಿ ನ್ಯಾಷನಲ್ ಪಾರ್ಕ್ ರಿಸರ್ವ್ ಯುನೆಸ್ಕೋ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಫಿಯರ್ ರಿಸರ್ವ್ನಲ್ಲಿದೆ.

ಎತ್ತರದ ಕಣಿವೆ

ಹೂವುಗಳ ಕಣಿವೆ ಎತ್ತರದ ಹಿಮಾಲಯನ್ ಕಣಿವೆಯಾಗಿದ್ದು, ಇದನ್ನು ಪ್ರಸಿದ್ಧ ಪರ್ವತಾರೋಹಿಗಳು, ಸಸ್ಯವಿಜ್ಞಾನಿಗಳು ಮತ್ತು ಸಾಹಿತ್ಯದಲ್ಲಿ ಬಹುಕಾಲದಿಂದ ಅಂಗೀಕರಿಸಲಾಗಿದೆ. ಇದು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಮತ್ತು ಇದನ್ನು ಹಿಂದೂ ಧರ್ಮದಲ್ಲಿ ಉಲ್ಲೇಖಿಸಲಾಗಿದೆ. ಪ್ರಾಚೀನ ಕಾಲದಿಂದಲೂ ಸ್ಥಳೀಯ ಜನರು ಕಣಿವೆಗೆ ಭೇಟಿ ನೀಡಿದ್ದಾರೆ ಭಾರತೀಯ ಯೋಗಿಗಳು ಧ್ಯಾನಕ್ಕಾಗಿ ಕಣಿವೆಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಹೂವುಗಳ ಕಣಿವೆ ಅನೇಕ ವಿಭಿನ್ನ ವರ್ಣರಂಜಿತ ಹೂವುಗಳನ್ನು ಹೊಂದಿದೆ, ಸಮಯ ಮುಂದುವರೆದಂತೆ ವಿವಿಧ ಬಣ್ಣಗಳನ್ನು ತೆಗೆದುಕೊಳ್ಳುತ್ತದೆ. ಕಣಿವೆಯನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು ಮತ್ತು ಈಗ ಅದು ವಿಶ್ವ ಪರಂಪರೆಯ ತಾಣವಾಗಿದೆ.

ಈ ಉದ್ಯಾನವು ತನ್ನ ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು ಇಲ್ಲಿನ ಹುಲ್ಲುಗಾವಲಿನ ಮೈದಾನಗಳಲ್ಲಿ ನೂರಾರು ಬಗೆಯ ಹೂವುಗಳ ಬೃಹತ್ ನೈಸರ್ಗಿಕ ತೋಟವನ್ನೆ ಕಾಣಬಹುದು ಎಂಥವರೆ ಆಗಲಿ ಇಲ್ಲಿನ ಪರಿಸರದಲ್ಲಿ ಒಂದೆರಡು ಸುತ್ತು ಹೋಡೆದರೆ ಸಾಕು ತಮ್ಮೆಲ್ಲ ಕಷ್ಟ, ಕಾರ್ಪಣ್ಯಗಳನ್ನು ಮರೆತು ಉಲ್ಲಾಸ, ಉತ್ಸಾಹಗಳನ್ನು ಮತ್ತೆ ಮರಳಿ ಪಡೆಯಬಹುದು.


ಕೇವಲ ಪುಷ್ಪಕಣಿವೆಯಂತಲ್ಲ, ಇಲ್ಲಿ ಆಕರ್ಷಕ ಪ್ರಾಣಿ ಪಕ್ಷಿಅಗಳನ್ನೂ ಸಹ ಕಾನಬಹುದಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಕಪ್ಪು ಕರಡಿ, ಹಿಮ ಚಿರತೆ, ಕಂದು ಕರಡಿ ಮತ್ತು ನೀಲಿ ಕುರಿಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. ನಂದಾದೇವಿ ರಾಷ್ಟ್ರೀಯ ಉದ್ಯಾನದೊಂದಿಗೆ ಈ ಪುಷ್ಪಕಣಿವೆಯು ಸಾಮಾನ್ಯವಾಗಿ ಗುರುತಿಸಲ್ಪಡುತ್ತದೆ. ಇವೆರಡನ್ನು ಒಟ್ಟಾರೆಯಾಗಿ ವಿಶ್ವ ಪಾರಂಪರಿಕ ತಾಣ ಎಂದು ಮಾನ್ಯ ಮಾಡಲಾಗಿದೆ. ಇದರ ಭೂಮೇಲ್ಮೈ ಪ್ರದೇಶವು ಪರ್ವತಗಳನ್ನು ಹೊಂದಿದ್ದರೂ ಇವು ಅಷ್ಟೊಂದು ಕಡಿದಾಗಿಲ್ಲ  ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಸುಮಾರು 87.5 ಚ.ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ತನ್ನ ಮೇಲ್ಮೈ ಮೇಲೆ ವಿವಿಧ ಬಗೆಯ ಸಸ್ಯಗಳು, ಅಂದ ಚೆಂದದ, ಬಣ್ಣ ಬಣ್ಣದ ಹೂವುಗಳನ್ನು, ಕೀಟಗಳನ್ನು ಹೊಂದಿರುವ ಶ್ರೀಮಂತ ಜೈವಿಕ ಪ್ರದೇಶವಾಗಿದೆ.


ಪರಿಸರ ಪ್ರವಾಸೋದ್ಯಮಕ್ಕೆ ಮಾದರಿಯಾಗಿರುವ ಪುಷ್ಪಕಣಿವೆ ಪಶ್ಚಿಮ ಹಿಮಾಲಯದಲ್ಲಿರುವ ಜೀವವಲಯದ ಪ್ರತಿನಿಧಿ ಅಂತಲೇ ಹೇಲಬಹುದು. ಅಲ್ಲದೆ ಇಲ್ಲಿರುವ ಸುಂದರ ಆಲ್ಪೈನ್ ಗಿಡಮರಗಳ ಕಾಡುಗಳು ವಿದೇಶಗಲಲ್ಲಿರುವ ಉದ್ಯಾನಗಳಂತೆ ಕಂಡುಬರುತ್ತವೆ.
ಇಲ್ಲಿನ ಜೀವ ವೈವಿಧ್ಯಗಳು ಒಂದು ರೀತಿಯಲ್ಲಿ ವಿಶಿಷ್ಟವಾಗಿವೆ ಹಾಗೂ ಅಳಿವಿನಂಚಿನಲ್ಲಿವೆ. ಏಕೆಂದರೆ ಇಲ್ಲಿ ಕಂಡುಬರುವ ಕೆಲವು ಅಪರೂಪದ ಜೀವಿಗಳು ಭಾರತದ ಇತರೆ ಭಾಗ ಮಾತ್ರವಲ್ಲ, ಸ್ವತಃ ಇದರ ಪಕ್ಕದಲ್ಲೆ ಇರುವ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲೂ ಸಹ ಕಂಡುಬರುವುದಿಲ್ಲ.  ಇನ್ನೊಂದು ಸಂಗತಿಯೆಂದರೆ ಇಲ್ಲಿ ಔಷಧೀಯ ಗುಣವುಳ್ಳ ಅನೇಕ ವಿಶಿಷ್ಟ ರೀತಿಯ, ಮತ್ತಿನ್ನೆಲ್ಲೂ ಕಂಡುಬರದ ಗಿಡ ಮೂಲಿಕೆಗಳನ್ನು ಕಾನಬಹುದು. ಅಲ್ಲದೆ ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.

ಈ ಕಣಿವೆ ಪ್ರದೇಶವನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು. ಉತ್ತರಾಖಂಡದ ಗಡ್ವಾಲ್ ಭಾಗದಲ್ಲಿರುವ ಈ ಕಣಿವೆ ಪ್ರದೇಶವನ್ನು ವರ್ಷದ ಎಲ್ಲಾ ಸಮಯದಲ್ಲೂ ತಲುಪುವುದು ಕಷ್ಟಕರವಾಗಿದೆ. ಜೂನ್ ನಿಂದ ಸೆಪ್ಟಂಬರ್ ಇಲ್ಲಿಗೆ ತೆರಳಲು ಪ್ರಶಸ್ತ ಸಮಯವೆಂದೆ ಹೇಳಬಹುದು. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಅಲ್ಲದೆ ಜಾನುವಾರುಗಳನ್ನು ಇಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜೂನ್ ನಿಂದ ಅಕ್ಟೋಬರ್ ತಿಂಗಳವರೆಗೆ ತೆರೆದಿರುವ ಈ ಪ್ರದೇಶವು ವರ್ಷದ ಇತರ ಸಮಯದಲ್ಲಿ ಸಂಪೂರ್ಣವಾಗಿ ಹಿಮದಿಂದ ಮುಚ್ಚಿಹೋಗಿರುತ್ತದೆ.


ಚಾರಣದ ಮೂಲಕವೆ ಈ ಕಣಿವೆಯನ್ನು ತಲುಪಬೇಕಾಗಿದೆ. ಅದಕ್ಕೆಂದೆ ಸುಮಾರು ಹನ್ನೆರಡು ಕಿ.ಮೀ. ಗಳಷ್ಟು ದೂರವನ್ನು ಕಾಲ್ನಡೆಯಿಂದಲೆ ಕ್ರಮಿಸಬೇಕಾಗುತ್ತದೆ. ಈ ಕಣಿವೆಗೆ ಹತ್ತಿರದಲ್ಲಿರುವ ಪಟ್ಟಣವೆಂದರೆ ಜೋಷಿಮಠ.
ಜೋಷಿಮಠವು ಹರಿದ್ವಾರ ಮತ್ತು ಡೆಹ್ರಾ ಡೂನ್ ನಗರಗಳೋದಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಜೋಷಿಮಠದಿಂದ ಬದರಿನಾಥಕ್ಕೆ ತೆರಳುವ ರಸ್ತೆಯಲ್ಲಿ ಗೋವಿಂದ್ ಘಾಟ್ ಎಂಬ ಹಳ್ಳಿಗೆ ಸಾಗಿ ಅಲ್ಲಿಂದ ಮುಂದೆ ಕಾಲುದಾರಿಯನ್ನು ಹಿಡಿದು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಕ್ಕೆ ತೆರಳಬೇಕಾಗುತ್ತದೆ.

ಗೋವಿಂದ ಘಾಟ್ ಈ ಚಾರಣದ ಪ್ರಾರಂಭಿಕ ಹಂತವಾಗಿದ್ದು ಇಲ್ಲಿಂದ ಹದಿನಾಲ್ಕು ಕಿ.ಮೀ ಗಳಷ್ಟು ಚಾರಣ ಮಾಡಿದಾಗ ಘಂಘಾರಿಯಾ ಎಂಬ ಪುಟ್ಟ ಗ್ರಾಮ ದೊರೆಯುತ್ತದೆ. ವಿಶೇಷವೆಂದರೆ ಇಲ್ಲಿಂದ ಚಾರಣ ಪಥವು ಎರಡು ಕವಲುಗಳಲ್ಲಿ ಒಡೆದಿದ್ದು ಒಂದು ಪುಷ್ಪಕಣೆವೆಯೆಡೆ ಹೋದರೆ ಇನ್ನೊಂದು ಹೇಮಕುಂಡ್ ಸಾಹಿಬ್ ನತ್ತ ಕರೆದೊಯ್ಯುತ್ತದೆ. ಗೋವಿಂದ್ ಘಾಟ್ ನಿಂದ ಘಂಘಾರಿಯಾಗೆ ಹೋಗುವ ಮಾರ್ಗ.
source:- wikipedia & nativeplanet

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…