News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
India, Place, tourism

ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

364

ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್ ಫೆಸೆಂಟ್ ಮತ್ತು ಇತರ ಎತ್ತರದ ಪಕ್ಷಿಗಳು ಸೇರಿವೆ.  ಸಮುದ್ರ ಮಟ್ಟದಿಂದ 3352 ರಿಂದ 3658 ಮೀಟರ್ ಎತ್ತರದಲ್ಲಿ, ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನದ ಸೌಮ್ಯ ಭೂದೃಶ್ಯವು ಪೂರ್ವಕ್ಕೆ ನಂದಾ ದೇವಿ ರಾಷ್ಟ್ರೀಯ ಉದ್ಯಾನದ ಒರಟಾದ ಪರ್ವತ ಅರಣ್ಯವನ್ನು ಪೂರೈಸುತ್ತದೆ. ಗ್ರೇಟ್ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಒಂದು ವಿಶಿಷ್ಟ ಪರಿವರ್ತನಾ ವಲಯವನ್ನು ಒಳಗೊಂಡಿದೆ. ಈ ಉದ್ಯಾನವನವು 87.50 ಕಿಮೀ 2 ವಿಸ್ತಾರದಲ್ಲಿದೆ ಮತ್ತು ಇದು ಸುಮಾರು 8 ಕಿ.ಮೀ ಉದ್ದ ಮತ್ತು 2 ಕಿ.ಮೀ ಅಗಲವಿದೆ. ಉದ್ಯಾನವು ಸಂಪೂರ್ಣವಾಗಿ ಸಮಶೀತೋಷ್ಣ ಆಲ್ಪೈನ್ ವಲಯದಲ್ಲಿದೆ. ಎರಡೂ ಉದ್ಯಾನವನಗಳು ನಂದಾ ದೇವಿ ಬಯೋಸ್ಫಿಯರ್ ರಿಸರ್ವ್ (223,674 ಹೆಕ್ಟೇರ್) ನಲ್ಲಿ ಆವರಿಸಲ್ಪಟ್ಟಿವೆ, ಇದು ಬಫರ್ ವಲಯದಿಂದ (5,148.57 ಕಿಮಿ 2) ಮತ್ತಷ್ಟು ಸುತ್ತುವರೆದಿದೆ ನಂದಾ ದೇವಿ ನ್ಯಾಷನಲ್ ಪಾರ್ಕ್ ರಿಸರ್ವ್ ಯುನೆಸ್ಕೋ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಫಿಯರ್ ರಿಸರ್ವ್ನಲ್ಲಿದೆ.

ಎತ್ತರದ ಕಣಿವೆ

ಹೂವುಗಳ ಕಣಿವೆ ಎತ್ತರದ ಹಿಮಾಲಯನ್ ಕಣಿವೆಯಾಗಿದ್ದು, ಇದನ್ನು ಪ್ರಸಿದ್ಧ ಪರ್ವತಾರೋಹಿಗಳು, ಸಸ್ಯವಿಜ್ಞಾನಿಗಳು ಮತ್ತು ಸಾಹಿತ್ಯದಲ್ಲಿ ಬಹುಕಾಲದಿಂದ ಅಂಗೀಕರಿಸಲಾಗಿದೆ. ಇದು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಮತ್ತು ಇದನ್ನು ಹಿಂದೂ ಧರ್ಮದಲ್ಲಿ ಉಲ್ಲೇಖಿಸಲಾಗಿದೆ. ಪ್ರಾಚೀನ ಕಾಲದಿಂದಲೂ ಸ್ಥಳೀಯ ಜನರು ಕಣಿವೆಗೆ ಭೇಟಿ ನೀಡಿದ್ದಾರೆ ಭಾರತೀಯ ಯೋಗಿಗಳು ಧ್ಯಾನಕ್ಕಾಗಿ ಕಣಿವೆಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಹೂವುಗಳ ಕಣಿವೆ ಅನೇಕ ವಿಭಿನ್ನ ವರ್ಣರಂಜಿತ ಹೂವುಗಳನ್ನು ಹೊಂದಿದೆ, ಸಮಯ ಮುಂದುವರೆದಂತೆ ವಿವಿಧ ಬಣ್ಣಗಳನ್ನು ತೆಗೆದುಕೊಳ್ಳುತ್ತದೆ. ಕಣಿವೆಯನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು ಮತ್ತು ಈಗ ಅದು ವಿಶ್ವ ಪರಂಪರೆಯ ತಾಣವಾಗಿದೆ.

ಈ ಉದ್ಯಾನವು ತನ್ನ ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು ಇಲ್ಲಿನ ಹುಲ್ಲುಗಾವಲಿನ ಮೈದಾನಗಳಲ್ಲಿ ನೂರಾರು ಬಗೆಯ ಹೂವುಗಳ ಬೃಹತ್ ನೈಸರ್ಗಿಕ ತೋಟವನ್ನೆ ಕಾಣಬಹುದು ಎಂಥವರೆ ಆಗಲಿ ಇಲ್ಲಿನ ಪರಿಸರದಲ್ಲಿ ಒಂದೆರಡು ಸುತ್ತು ಹೋಡೆದರೆ ಸಾಕು ತಮ್ಮೆಲ್ಲ ಕಷ್ಟ, ಕಾರ್ಪಣ್ಯಗಳನ್ನು ಮರೆತು ಉಲ್ಲಾಸ, ಉತ್ಸಾಹಗಳನ್ನು ಮತ್ತೆ ಮರಳಿ ಪಡೆಯಬಹುದು.


ಕೇವಲ ಪುಷ್ಪಕಣಿವೆಯಂತಲ್ಲ, ಇಲ್ಲಿ ಆಕರ್ಷಕ ಪ್ರಾಣಿ ಪಕ್ಷಿಅಗಳನ್ನೂ ಸಹ ಕಾನಬಹುದಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಕಪ್ಪು ಕರಡಿ, ಹಿಮ ಚಿರತೆ, ಕಂದು ಕರಡಿ ಮತ್ತು ನೀಲಿ ಕುರಿಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. ನಂದಾದೇವಿ ರಾಷ್ಟ್ರೀಯ ಉದ್ಯಾನದೊಂದಿಗೆ ಈ ಪುಷ್ಪಕಣಿವೆಯು ಸಾಮಾನ್ಯವಾಗಿ ಗುರುತಿಸಲ್ಪಡುತ್ತದೆ. ಇವೆರಡನ್ನು ಒಟ್ಟಾರೆಯಾಗಿ ವಿಶ್ವ ಪಾರಂಪರಿಕ ತಾಣ ಎಂದು ಮಾನ್ಯ ಮಾಡಲಾಗಿದೆ. ಇದರ ಭೂಮೇಲ್ಮೈ ಪ್ರದೇಶವು ಪರ್ವತಗಳನ್ನು ಹೊಂದಿದ್ದರೂ ಇವು ಅಷ್ಟೊಂದು ಕಡಿದಾಗಿಲ್ಲ  ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಸುಮಾರು 87.5 ಚ.ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ತನ್ನ ಮೇಲ್ಮೈ ಮೇಲೆ ವಿವಿಧ ಬಗೆಯ ಸಸ್ಯಗಳು, ಅಂದ ಚೆಂದದ, ಬಣ್ಣ ಬಣ್ಣದ ಹೂವುಗಳನ್ನು, ಕೀಟಗಳನ್ನು ಹೊಂದಿರುವ ಶ್ರೀಮಂತ ಜೈವಿಕ ಪ್ರದೇಶವಾಗಿದೆ.


ಪರಿಸರ ಪ್ರವಾಸೋದ್ಯಮಕ್ಕೆ ಮಾದರಿಯಾಗಿರುವ ಪುಷ್ಪಕಣಿವೆ ಪಶ್ಚಿಮ ಹಿಮಾಲಯದಲ್ಲಿರುವ ಜೀವವಲಯದ ಪ್ರತಿನಿಧಿ ಅಂತಲೇ ಹೇಲಬಹುದು. ಅಲ್ಲದೆ ಇಲ್ಲಿರುವ ಸುಂದರ ಆಲ್ಪೈನ್ ಗಿಡಮರಗಳ ಕಾಡುಗಳು ವಿದೇಶಗಲಲ್ಲಿರುವ ಉದ್ಯಾನಗಳಂತೆ ಕಂಡುಬರುತ್ತವೆ.
ಇಲ್ಲಿನ ಜೀವ ವೈವಿಧ್ಯಗಳು ಒಂದು ರೀತಿಯಲ್ಲಿ ವಿಶಿಷ್ಟವಾಗಿವೆ ಹಾಗೂ ಅಳಿವಿನಂಚಿನಲ್ಲಿವೆ. ಏಕೆಂದರೆ ಇಲ್ಲಿ ಕಂಡುಬರುವ ಕೆಲವು ಅಪರೂಪದ ಜೀವಿಗಳು ಭಾರತದ ಇತರೆ ಭಾಗ ಮಾತ್ರವಲ್ಲ, ಸ್ವತಃ ಇದರ ಪಕ್ಕದಲ್ಲೆ ಇರುವ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲೂ ಸಹ ಕಂಡುಬರುವುದಿಲ್ಲ.  ಇನ್ನೊಂದು ಸಂಗತಿಯೆಂದರೆ ಇಲ್ಲಿ ಔಷಧೀಯ ಗುಣವುಳ್ಳ ಅನೇಕ ವಿಶಿಷ್ಟ ರೀತಿಯ, ಮತ್ತಿನ್ನೆಲ್ಲೂ ಕಂಡುಬರದ ಗಿಡ ಮೂಲಿಕೆಗಳನ್ನು ಕಾನಬಹುದು. ಅಲ್ಲದೆ ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.

ಈ ಕಣಿವೆ ಪ್ರದೇಶವನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು. ಉತ್ತರಾಖಂಡದ ಗಡ್ವಾಲ್ ಭಾಗದಲ್ಲಿರುವ ಈ ಕಣಿವೆ ಪ್ರದೇಶವನ್ನು ವರ್ಷದ ಎಲ್ಲಾ ಸಮಯದಲ್ಲೂ ತಲುಪುವುದು ಕಷ್ಟಕರವಾಗಿದೆ. ಜೂನ್ ನಿಂದ ಸೆಪ್ಟಂಬರ್ ಇಲ್ಲಿಗೆ ತೆರಳಲು ಪ್ರಶಸ್ತ ಸಮಯವೆಂದೆ ಹೇಳಬಹುದು. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಅಲ್ಲದೆ ಜಾನುವಾರುಗಳನ್ನು ಇಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜೂನ್ ನಿಂದ ಅಕ್ಟೋಬರ್ ತಿಂಗಳವರೆಗೆ ತೆರೆದಿರುವ ಈ ಪ್ರದೇಶವು ವರ್ಷದ ಇತರ ಸಮಯದಲ್ಲಿ ಸಂಪೂರ್ಣವಾಗಿ ಹಿಮದಿಂದ ಮುಚ್ಚಿಹೋಗಿರುತ್ತದೆ.


ಚಾರಣದ ಮೂಲಕವೆ ಈ ಕಣಿವೆಯನ್ನು ತಲುಪಬೇಕಾಗಿದೆ. ಅದಕ್ಕೆಂದೆ ಸುಮಾರು ಹನ್ನೆರಡು ಕಿ.ಮೀ. ಗಳಷ್ಟು ದೂರವನ್ನು ಕಾಲ್ನಡೆಯಿಂದಲೆ ಕ್ರಮಿಸಬೇಕಾಗುತ್ತದೆ. ಈ ಕಣಿವೆಗೆ ಹತ್ತಿರದಲ್ಲಿರುವ ಪಟ್ಟಣವೆಂದರೆ ಜೋಷಿಮಠ.
ಜೋಷಿಮಠವು ಹರಿದ್ವಾರ ಮತ್ತು ಡೆಹ್ರಾ ಡೂನ್ ನಗರಗಳೋದಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಜೋಷಿಮಠದಿಂದ ಬದರಿನಾಥಕ್ಕೆ ತೆರಳುವ ರಸ್ತೆಯಲ್ಲಿ ಗೋವಿಂದ್ ಘಾಟ್ ಎಂಬ ಹಳ್ಳಿಗೆ ಸಾಗಿ ಅಲ್ಲಿಂದ ಮುಂದೆ ಕಾಲುದಾರಿಯನ್ನು ಹಿಡಿದು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಕ್ಕೆ ತೆರಳಬೇಕಾಗುತ್ತದೆ.

ಗೋವಿಂದ ಘಾಟ್ ಈ ಚಾರಣದ ಪ್ರಾರಂಭಿಕ ಹಂತವಾಗಿದ್ದು ಇಲ್ಲಿಂದ ಹದಿನಾಲ್ಕು ಕಿ.ಮೀ ಗಳಷ್ಟು ಚಾರಣ ಮಾಡಿದಾಗ ಘಂಘಾರಿಯಾ ಎಂಬ ಪುಟ್ಟ ಗ್ರಾಮ ದೊರೆಯುತ್ತದೆ. ವಿಶೇಷವೆಂದರೆ ಇಲ್ಲಿಂದ ಚಾರಣ ಪಥವು ಎರಡು ಕವಲುಗಳಲ್ಲಿ ಒಡೆದಿದ್ದು ಒಂದು ಪುಷ್ಪಕಣೆವೆಯೆಡೆ ಹೋದರೆ ಇನ್ನೊಂದು ಹೇಮಕುಂಡ್ ಸಾಹಿಬ್ ನತ್ತ ಕರೆದೊಯ್ಯುತ್ತದೆ. ಗೋವಿಂದ್ ಘಾಟ್ ನಿಂದ ಘಂಘಾರಿಯಾಗೆ ಹೋಗುವ ಮಾರ್ಗ.
source:- wikipedia & nativeplanet

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…