ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು.

ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ…
ತ್ರೇತಾಯುಗದಲ್ಲಿ ರಾವಣನು ಬ್ರಹ್ಮ ಮತ್ತು ಶಿವನ ವರ ಪ್ರಸಾದದಿಂದ ಎಲ್ಲಾ ಲೋಕಗಳನ್ನು ಗೆದ್ದಿದ್ದನು. ಅಲ್ಲದೆ ಆತ ನವಗ್ರಹಗಳನ್ನು ಜಯಿಸಿ, ತನ್ನ ಸಿಂಹಾಸವನ್ನೇರುವ ಮೆಟ್ಟಿಲುಗಳಾಗಿ ಅವರನ್ನು ನೇಮಿಸಿಕೊಂಡನು. ಹೀಗೆ ಇದ್ದಾಗ ರಾವಣನ ಪತ್ನಿ ಮಂಡೋದರೆ ರಾವಣನ ಮಗನಾದ ಮೇಘನಾದನಿಗೆ ಜನ್ಮ ನೀಡುವ ಕಾಲ ಬಂದಿತು. ಆಗ ಮಹಾ ಜ್ಯೋತಿಷ್ಯಜ್ಞನಾದ ರಾವಣನು ಎಲ್ಲಾ ಗ್ರಹಗಳನ್ನು ಆತನ ಜನ್ಮಕುಂಡಲಿಯ 11ನೇ ಮನೆಯಲ್ಲಿ ಹೋಗಿ ನೆಲೆಸುವಂತೆ ಆದೇಶ ನೀಡಿದನು. ಇದರಿಂದ ತನ್ನ ಮಗ ಅಮರನಾಗುತ್ತಾನೆ ಎಂಬ ಆಸೆ ರಾವಣನದಾಗಿತ್ತು.

ಆದರೆ ಇದು ದೇವತೆಗಳಲ್ಲಿ ಭಯವನ್ನುಂಟು ಮಾಡಿತು. ಆಗ ಇದನ್ನು ಅರಿತು, ಮಗು ಜನಿಸುವಾಗ ಶನಿ ಉಚ್ಛ ಸ್ಥಾನದಲ್ಲಿ ಕೂರುವ ಬದಲು ಮೇಘನಾದನ ಕುಂಡಲಿಯಲ್ಲಿ ನೀಚ ಸ್ಥಾನನಾಗಿ ಕುಳಿತು, 12ನೆಯ ಮನೆಯವರೆಗು ಕಾಲು ಚಾಚಿ ಬಿಟ್ಟನು.
ಇದು ರಾವಣನಿಗೆ ತಿಳಿಯಲು ಹೆಚ್ಚು ಸಮಯವಾಗಲಿಲ್ಲ, ಏಕೆಂದರೆ ಶನಿಯ ಈ ನಡೆ ತನ್ನ ಮಗನ ಸಾವಿಗೆ ಕಾರಣನಾಗುತ್ತೆ ಎಂದು ಆತ ಗ್ರಹಿಸಿದನು. ಈ ಕಾರಣವಾಗಿ ಶನಿಯನ್ನು ಒಂದು ಕತ್ತಲ ಕೋಣೆಯಲ್ಲಿ ಕೂಡಿಹಾಕಿದನು. ಇದರಿಂದ ಶನಿಯ ಮುಖವನ್ನು ಯಾರೂ ನೋಡುವುದಿಲ್ಲ ಎಂಬುದು ಆತನ ಅನಿಸಿಕೆಯಾಗಿತ್ತು. ಆದರೆ ಸೀತೆಯನ್ನು ಹುಡುಕುಲು ಬಂದ ಆಂಜನೇಯನು ಆ ಕತ್ತಲ ಕೋಣೆಯಲ್ಲಿ ಇಣುಕಿ ನೋಡಿ ಶನಿಯ ಕಣ್ಣಿಗೆ ಬಿದ್ದು ಬಿಟ್ಟನು.
ಆದರೆ ಶನಿಯ ಕಣ್ಣಿಗೆ ಬಿದ್ದನಲ್ಲ ಎಂಬ ಅಳುಕು ಹನುಮಂತನಿಗೂ ಸಹ ಕಾಡಿತು. ನವಗ್ರಹಗಳಲ್ಲಿ ಶನಿಯನ್ನು ಹೊರತುಪಡಿಸಿ, ಎಲ್ಲರನ್ನು ಹನುಮಂತ ಬಿಡುಗಡೆಗೊಳಿಸಿದ. ಇದನ್ನು ಶನಿ ಕೇಳಿದಾಗ, ನಿನ್ನನ್ನು ಬಿಡಿಸಿದರೆ ನೀನು ನನ್ನ ತಲೆಯ ಮೇಲೆ ಕೂರುವೆ ಎಂದು ಹನುಮಂತ ಹೇಳಿದ.

ಇದರಿಂದ ಶನಿಯು ಆತನಿಗೆ ಅಭಯವನ್ನು ನೀಡಿದ. ನಾನು ನಿನಗೆ ಸಹಾಯ ಮಾಡುವೆ ಎಂದು, ಆದರೂ ನೀನು ನನ್ನ ದೃಷ್ಟಿಗೆ ಬಿದ್ದಿದ್ದರಿಂದ, ನೀನು ಮನೆ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗುವೆ ಎಂದು ಶನಿ ಹೇಳಿದನು. ಹಾಗಾದರೆ ಬಾ ನಾನು ನಿನ್ನನ್ನು ಬಿಡಿಸುವೆ ನನಗೆ ಮನೆ,ಮಠ, ಹೆಂಡತಿ ಮತ್ತು ಮಕ್ಕಳು ಯಾರೂ ಇಲ್ಲ. ನನಗೆ ರಾಮನ ಅಡಿದಾವರೆ ಮತ್ತು ಆತನ ನಾಮ ಬಿಟ್ಟರೆ ಬೇರೆ ಸಂಪತ್ತಿಲ್ಲ ಎಂದು ಶನಿಯನ್ನು ಬಂಧ ಮುಕ್ತಗೊಳಿಸಿದನು.
ಹೀಗೆ ಶನಿ ಕೃತಜ್ಞತಾಪೂರ್ವಕವಾಗಿ ಹನುಮಂತನನ್ನು ಯಾರೂ ಪೂಜಿಸುವರೋ, ಅವರ ಮೇಲೆ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತೇನೆ ಎಂದು ಮಾತುಕೊಟ್ಟನು. ಒಂದು ನಂಬಿಕೆಯ ಪ್ರಕಾರ ಆಂಜನೇಯ ಲಂಕಾದಹನವನ್ನು ಸರಿಯಾಗಿ ಮಾಡಲಾಗಲಿಲ್ಲವಂತೆ, ಆಗ ಹನುಮಂತನ ಸಹಾಯಕ್ಕೆ ಬಂದ ಶನಿ ಲಂಕೆಯನ್ನು ನೋಡಿದ್ದರಿಂದ ಸ್ವರ್ಣಲಂಕ, ಭಸ್ಮವಾಗಿ ಕಪ್ಪು ಲಂಕಾವಾಯಿತಂತೆ.

ಮತ್ತೊಂದು ರೋಚಕ ಕತೆ ಶನಿ ಮತ್ತು ಆಂಜನೇಯನ ನಡುವೆ ನಡೆಯಿತು. ರಾಮಾಯಣ ಯುದ್ಧ ಮುಗಿದು, ಹನುಮಂತನು ಒಮ್ಮೆ ಗುಹೆಯಲ್ಲಿ ರಾಮಧ್ಯಾನ ಮಾಡುತ್ತ ಕುಳಿತಿದ್ದನು. ಆಗ ಶನಿ ಇದೇ ಸಮಯವೆಂದು ಆಂಜನೇಯನ ಹೆಗಲೇರಿದನು. ಇದರಿಂದ ರಾಮ ಧ್ಯಾನಕ್ಕೆ ಭಂಗ ಬಂದಿತು ಎಂದು ಆಂಜನೇಯನಿಗೆ ಸಿಟ್ಟು ಬಂದಿತು.

ಆದರು ಅದನ್ನು ನಿಗ್ರಹಿಸಿಕೊಂಡು, ಆಂಜನೇಯ ಹೀಗೆ ಹೇಳಿದ: ಹೇ ಶನಿದೇವ, ನಿಮ್ಮ ತಂದೆಯಾದ ಸೂರ್ಯ ದೇವನು ನನಗೆ ಅನೇಕ ವರ ನೀಡಿದ್ದಾನೆ. ಆತ ನನ್ನ ಗುರು, ಗುರುವಿನ ಮಗನನ್ನು ಶಿಕ್ಷಿಸುವ ಕೆಲಸ ನನಗೆ ನೀಡಬೇಡ. ಇಳಿದು ಹೋಗಿಬಿಡು ಎಂದು ಹೇಳಿದನು. ಅದಕ್ಕೆ ಶನಿಯು ಆಂಜನೇಯ, ಇದು ನನ್ನ ಸರದಿ, ಅದರ ಪ್ರಕಾರ ನಾನು ನಿನ್ನ ಹೆಗಲೇರಬೇಕು, ಇದು ವಿಧಿ ನಿಯಮ ಎಂದನು. ಮಾತಿಗೆ ಮಾತು ಬೆಳೆಯಿತು, ಶನಿ ಸೋಲಲಿಲ್ಲ.

ಆಗ ಆಂಜನೇಯನು ಉಗ್ರ ಸ್ವರೂಪವನ್ನು ತಾಳಿ ತನ್ನ ದೇಹವನ್ನು ಬೆಳೆಸಿದನು. ಇದರಿಂದ ಹೆಗಲ ಮೇಲಿದ್ದ ಶನಿ ಗುಹೆಯ ಛಾವಣಿ ಮತ್ತು ಆಂಜನೇಯನ ದೇಹದ ನಡುವೆ ಸಿಲುಕಿ ಅಪ್ಪಚ್ಚಿಯಾಗಿ ಹೋದನು. ಆ ನೋವನ್ನು ತಾಳಲಾರದೆ ಶನಿ ಸೋತು ಆಂಜನೇಯನನ್ನು ಅಂಗಲಾಚಿದನು. ಆಗ ಆಂಜನೇಯನು ರಾಮ ನಾಮ ಜಪ ಮಾಡುವವರ ತಂಟೆಗೆ ಹೋಗುವುದಿಲ್ಲ ಎಂದು ಮಾತು ನೀಡಿದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದನು. ಇದಕ್ಕೆ ಶನಿಯು ಸಹ ಅಸ್ತು ಎಂದನು.
ಎಷ್ಟಾದರು ಆಂಜನೇಯನನ್ನು ಸ್ಮರಿಸಿದರೆ ರಾಮನನ್ನು ಸ್ಮರಿಸಿದಂತೆ ಅಲ್ಲವೇ, ಹೀಗೆ ಹನುಮಂತನನ್ನು ನಾವು ಶನಿವಾರದಂದು ಪೂಜಿಸಲು ಆರಂಭಿದೆವು. ಇನ್ನೂ ಒಂದು ವಿಚಾರ ಏನಪ್ಪಾ ಎಂದರೆ ಆಂಜನೇಯ ಸಹ ಹುಟ್ಟಿದ್ದು, ಶನಿವಾರವಂತೆ!
ಕೃಪೆ : ಶ್ರೀದರ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…