ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್ ಪಾಯಿಂಟ್ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.
ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.