ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…