ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.
ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.
ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,
ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…