ದೇವರು-ಧರ್ಮ

ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

1612

ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

ಭಾಗವಾನ್ ಶಿವ ಲಿಂಗವನ್ನು ಪೂಜಿಸಲು ಹಲವು ಕ್ರಮಗಳಿವೆ…ಹೇಗೆಂದರೆ ಹಾಗೆ ಪೂಜಿಸುವಂತಿಲ್ಲ…ಹಾಗಾದ್ರೆ ಹೇಗೆ ಪೂಜಿಸಬೇಕು,ಹೇಗೆ ಪೂಜಿಸಬಾರದು ಮುಂದೆ ನೋಡಿ ತಿಳಿಯಿರಿ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.

*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.

*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.

*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.

*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.

*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.

*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.

*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..

*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.

*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಇಲ್ಲಿ ಓದಿ :-ಶಿವನ ಈ 5 ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ..???

ಇನ್ನೂ ಹಲವಾರು ವಿಧಿ-ವಿಧಾನಗಳನ್ನು ಶಿವಪೂಜೆಯಲ್ಲಿ ನಿರ್ದೇಶಿಸಲಾಗಿದೆ.. ಅವುಗಳಲ್ಲಿ ಇವು ಮುಖ್ಯ ಅಂಶಗಳಷ್ಟೇ..!!

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • inspirational

    24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

    ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….