ಸುದ್ದಿ

ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

203

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.

ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಮನರಂಜನೆ

    ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

    ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…