ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…