ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.
ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.
ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.
ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….