ಸುದ್ದಿ

ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

409

ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್‌ ಸೈನ್ಸ್‌ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್‌ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್‌ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್‌ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್‌ ಠಾಣೆಗೂ ಲಿಂಕ್‌ ಹೊಂದಿ ಅಲ್ಲೂ ಸೈರನ್‌ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್‌ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್‌ಡಿಎಲ್‌ಗೇ ಮಾರಬಹುದು.

ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್‌ ಸಂಖ್ಯೆ 9448777045 ಸಂಪರ್ಕಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…