ಸುದ್ದಿ

ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

360

ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್‌ ಸೈನ್ಸ್‌ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್‌ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್‌ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್‌ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್‌ ಠಾಣೆಗೂ ಲಿಂಕ್‌ ಹೊಂದಿ ಅಲ್ಲೂ ಸೈರನ್‌ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್‌ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್‌ಡಿಎಲ್‌ಗೇ ಮಾರಬಹುದು.

ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್‌ ಸಂಖ್ಯೆ 9448777045 ಸಂಪರ್ಕಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…