ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು :- ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:
ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:
ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦
ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:
ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):
ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:
ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :
ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦
ಕಾನೂನು ವೃತ್ತಿಪರರು :
ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):
ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:
ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.