News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉದ್ಯೋಗ

ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

794

ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು  :-                                                                                                                                                   ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:

ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:

ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦

ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:

ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):

ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:

ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :

ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦

ಕಾನೂನು ವೃತ್ತಿಪರರು :

ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):

ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

 ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:

ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…