ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು :- ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:
ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:
ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦
ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:
ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):
ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:
ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :
ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦
ಕಾನೂನು ವೃತ್ತಿಪರರು :
ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):
ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:
ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…