ಆಧ್ಯಾತ್ಮ

ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

3420

ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.

ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.

ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.

ಅಹಮದ್ ನಗರ ಜಿಲ್ಲೆಯ ಕೋಪರ್‌ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್‌ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.

ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.

ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್‌ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.

ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್‌ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)


ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್‌ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.


ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.

ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಸುದ್ದಿ, ಸ್ಪೂರ್ತಿ

    ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ ಟ್ರಂಪ್ ಆಹ್ವಾನಿಸಿದರೂ ಅಮೆರಿಕಕ್ಕೆ ತೆರಳಲಿಲ್ಲ, ಭಾರತದಲ್ಲೇ ರಿಸರ್ಚ್ ಮಾಡ್ತೇನೆ ಎಂದ ಗೋಪಾಲ್.

    ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…