ಆಧ್ಯಾತ್ಮ

ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

3353

ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.

ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.

ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.

ಅಹಮದ್ ನಗರ ಜಿಲ್ಲೆಯ ಕೋಪರ್‌ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್‌ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.

ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.

ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್‌ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.

ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್‌ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)


ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್‌ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.


ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.

ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…