News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

423

ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು.

ಕೆಲವು ವರ್ಷಗಳಿಂದಲೂ ಹೀಗೆಯೇ ಮಾಡುತ್ತಿದ್ದ ಆತನಿಗೆ ವಯಸ್ಸಾಗಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಮೊದಲೇ ಹೇಳಿದಂತೆ ತನ್ನವರೆಂಬುವರು ಯಾರೂ ಇಲ್ಲದಿರುವುದರಿಂದ ಸ್ಥಳೀಯ ಸ್ವಯಂಸೇವಾ ಸಂಸ್ಥೆಯು ಮುಂದಾಗಿ ಆತನ ಅಂತ್ಯಕ್ರಿಯೆಗಳನ್ನು ನಡೆಸಿದೆ.

ಆತನ ಗುಡಿಸಲಲ್ಲಿ ಹುಡುಕುವಾಗ ಕಣ್ಣು ಕುಕ್ಕುವ ದೃಶ್ಯ ಕಂಡು ಬಂದಿತು. ಪ್ಲಾಸ್ಟಿಕ್ ಚೀಲಗಳಲ್ಲಿ, ಗೋಣಿ ಚೀಲಗಳಲ್ಲಿ ಹಣ ಕಾಣಿಸಿದ್ದು, ಅದನ್ನು ಲೆಕ್ಕ ಹಾಕಿದಾಗ 1 ಕೋಟಿ 70 ಲಕ್ಷ 35 ಸಾವಿರ ರೂಪಾಯಿಗಳಿದ್ದವು. ಇದನ್ನು ಕಂಡವರೆಲ್ಲಾ ಬೆಚ್ಚಿ ಬಿದ್ದಿದ್ದಾರೆ.

ಆದರೆ ಆತ ಒಂದೊಂದು ಪೈಸೆಯನ್ನೂ ಕೂಡಿಟ್ಟ ಭಿಕ್ಷುಕನಾದ್ದರಿಂದ ಅನಾಥನಂತೆಯೇ ಲೋಕವನ್ನು ಬಿಟ್ಟಿದ್ದಾನೆ. ಕಳೆದ ವರ್ಷ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿಯೂ ನಡೆದಿದೆ. ಆದ್ದರಿಂದಲೇ ಹುಟ್ಟಿದಾಗ ಏನನ್ನೂ ತರುವುದಿಲ್ಲ. ಹೋಗುವಾಗ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ ಎಂಬ ವೇದಾಂತದ ಮಾತಿದೆ.

ಈ ಮಾತನ್ನು ಯಾರಾದರೂ ಮೃತಪಟ್ಟಿದ್ದಾಗ ಆಡುತ್ತಾರೆ ಆದರೂ ಮನುಷ್ಯನು ಮಾತ್ರ ಜೀವನವಿಡೀ ಹಣದ ಸುತ್ತಲೂ ಸುತ್ತುತ್ತಿರುತ್ತಾನೆ. ಭಿಕ್ಷೆ ಬೇಡಿ ಅಷ್ಟು ಹಣವನ್ನು ಗಳಿಸಿದ್ದಾನೆ ಎಂದರೆ ನಂಬಲು ಸ್ವಲ್ಪ ಅಚ್ಚರಿಯೇ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಕರ್ನಾಟಕ

    ಇಂದು ವೈದ್ಯರ ಮುಷ್ಕರ, ರೋಗಿಗಳ ಪರದಾಟ..!ತಿಳಿಯಲು ಇದನ್ನು ಓದಿ..

    ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
    ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.