ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.
ಜೀ ಕನ್ನಡ ವಾಹಿನಿಯು ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ಫೈನಲ್ ಸಂಚಿಕೆಯನ್ನು ನೇರ ಪ್ರಸಾರ ಮಾಡಿದ್ದು, ಸ್ಪರ್ಧಿಗಳ ಗೆಲುವು ಜನರ ವೋಟಿಂಗ್ ಮೇಲೆ ಅವಲಂಬಿತವಾಗಿತ್ತು.
ಹಾಗಾಗಿ ಇದರಲ್ಲಿ ಈ ಶೋನ ತೀರ್ಪುಗಾರರಿಗೆ ಸ್ಪರ್ಧಿಗಳ ಪ್ರತಿಭೆಯನ್ನಾಧರಿಸಿ ತೀರ್ಪು ಕೊಡುವ ಅವಕಾಶ ಇರಲಿಲ್ಲ. ಆದ್ದರಿಂದ ಜನರ ವೋಟಿಂಗ್ ಪ್ರಕಾರ ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಹಾಗೂ ಇದೇ ಮಠದ ಮೆಹಬೂಬ್ ಸಾಬ್ ರನ್ನರ್ ಆಪ್ ಆಗಿದ್ದಾರೆ.
ಹಾಗೂ ಶ್ರೀ ಹರ್ಷರವರು ಮೂರನೇ ಸ್ತಾನ ಮತ್ತು ಧನುಶ್’ರವರು ನಾಲ್ಕನೇ ಸ್ತಾನಕ್ಕೆ ಅಲಂಕರಿಸಿದ್ದಾರೆ. ಇದರೆಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಈ ತೀರ್ಪಿನ ಬಗ್ಗೆ ಅಸಮಾಧಾನವಾಗಿದ್ದು, ಇದು ನಿಜವಾದ ಕಾಲಾವಿದನಿಗೆ ಮಾಡಿದ ಮೋಸ ಎಂದು ಪ್ರತಿಕ್ರಯಿಸಿದ್ದಾರೆ.
ಅವರ ಪ್ರಕಾರ ನಿಜವಾದ ವಿನ್ನರ್ ಶ್ರೀ ಹರ್ಷ ರವರಾಗಿದ್ದು, ರನ್ನರ್ ಆಪ್ ಧನುಶ್’ರವರಿಗೆ ಮತ್ತು ಮೂರನೇ ಸ್ತಾನವಾಗಿ ಮೆಹಬೂಬ್ ಸಾಬ’ರವರಿಗೆ ನೀಡಬೇಕಿತ್ತೆಂದು ಅಸಮಾಧಾನಗೊಂಡಿದ್ದಾರೆ.
ಇದಕ್ಕೆ ಕಾರಣವೂ ಇದ್ದು, ಎಲ್ಲಾ ಜನರಿಗೂ ಸಂಗೀತದ ಬಗ್ಗೆ ಏನೂ ತಿಳುವಳಿಕೆ ಇರುತ್ತದೆ. ಸಂಗೀತದ ಗಂಧ ಗಾಳಿಯು ಗೊತ್ತಿಲ್ಲದವರು ಹೇಗೆ ತೀರ್ಪು ಕೊಡಲು ಸಾಧ್ಯ, ಎಂದು ಜನರ ತೀರ್ಪಿನ ಬಗ್ಗೆ ಅಸಮಧಾನದ ಹೊಗೆ ಎದ್ದಿದೆ.
ಹಾಗಾದ್ರೆ ನಿಮ್ಮ ಪ್ರಕಾರ ಯಾರಿಗೆ ಮೋಸ ಆಗಿದೆ! ಯಾರೂ ಜಯಶಾಲಿ ಆಗಬೇಕಿತ್ತು? ಮತ್ತು ಉಳಿದ ಸ್ತಾನಗಳಿಗೆ ಯಾರೂ ಅರ್ಹರಾಗಿದ್ದರು ಎಂಬುದನ್ನು ನಿಮ್ಮ ಕಾಮೆಂಟ್ ಮುಖಾಂತರ ತಿಳಿಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…