News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
inspirational

“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

13

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ.

ಪ್ರತಿಭಟನೆ ಹೇಗೆ ನಡೆಯುತ್ತಿದೆ?

  • ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ
  • ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ
  • ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ

ನೌಕರರ ಪ್ರಮುಖ ಬೇಡಿಕೆಗಳು

ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು:

  • 38 ತಿಂಗಳ ವೇತನ ಹಿಂಬಾಕಿ ಪಾವತಿ
  • 7ನೇ ವೇತನ ಆಯೋಗದಂತೆ ವೇತನ ಪರಿಷ್ಕರಣೆ
  • ಕನಿಷ್ಠ 25% ವೇತನ ಹೆಚ್ಚಳ
  • ಸಂಘಟನೆಗಳ ಮಾನ್ಯತೆಗಾಗಿ ಚುನಾವಣೆ ನಡೆಸುವುದು

ಸರ್ಕಾರದ ಪ್ರತಿಕ್ರಿಯೆ

ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಘೋಷಿಸಿದೆ:

  • ಸುಮಾರು 26 ತಿಂಗಳ ಹಿಂಬಾಕಿ ಬಿಡುಗಡೆ
  • 3% ರಿಂದ 5% ವೇತನ ಹೆಚ್ಚಳ ಪ್ರಸ್ತಾವನೆ
  • ಏಪ್ರಿಲ್ 17ರಂದು ಮತ್ತೊಂದು ಮಹತ್ವದ ಸಭೆ ನಿಗದಿ

ಯಾಕೆ ಮತ್ತೆ ಪ್ರತಿಭಟನೆ?

  • ಕಳೆದ 3 ವರ್ಷಗಳಿಂದ ಪುನಃಪುನಃ ಮಾತುಕತೆ ನಡೆದರೂ ಫಲಿತಾಂಶ ಇಲ್ಲ
  • ಸರ್ಕಾರ ಹಂತ ಹಂತವಾಗಿ ಹಣ ನೀಡಲು ಯತ್ನಿಸುತ್ತಿದೆ
  • ನೌಕರರು ಪೂರ್ಣ ಬಾಕಿ ಹಣವೇ ಬೇಕು ಎಂದು ಒತ್ತಾಯ
  • ಸಾರಿಗೆ ನೌಕರರಿಗೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆಯ ಯೋಜನೆ ಇದೆ, ಅದರ ಪ್ರಕಾರ 2020 ರಲ್ಲಿ ಆಗಬೇಕಾಗಿದ್ದ ವೇತನ ಪರಿಷ್ಕರಣೆಯನ್ನು ಕಾರಣಾಂತರಗಳಿಂದ ಆಗಿನ ಬಿಜೆಪಿ ಸರ್ಕಾರ 2023 ರಲ್ಲಿ ಶೇಕಡಾ 15 ರಂತೆ ಮಾಡಲಾಯಿತು, ಆದರೆ ಸಾರಿಗೆ ನೌಕರರಿಗೆ ಯಾವುದೇ ಹಿಂಬಾಕಿಯನ್ನು ನೀಡಿಲ್ಲ. ಈಗ ಮತ್ತೆ 2024 ರಲ್ಲಿ ವೇತನ ಪರಿಷ್ಕರಣೆಯ ಅವಧಿ ಬಂದರೂ ಯಾವುದೇ ರೀತಿಯ ವೇತನ ಪರಿಷ್ಕರಣೆ ಆಗಿಲ್ಲ.
    ಈ ದುಬಾರಿ ಬೆಲೆ ಏರಿಕೆಯ ವಾತಾವರಣದಲ್ಲಿ ಈ ಸಾರಿಗೆ ನೌಕರರಿಗೆ ಯಾರೂ ಸಹಾ ದಯೆ ತೋರುತ್ತಿಲ್ಲ.

About the author / 

Shashikumar H M

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.

  • ಸುದ್ದಿ

    ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

    ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…