News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ದೇವರು-ಧರ್ಮ

ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

8568

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸರ್ಪಗಳ ತಾಯಿ ಯಾರೂ? ಅವಳು ತನ್ನ ಮಕ್ಕಳಿಗೆ ಶಾಪ ಕೊಡಲು ಕಾರಣವೇನು ? ಇವೆಲ್ಲದರ ಬಗ್ಗೆ ತಿಳಿಯುವ ಕುತೂಹಲ ಇದೆಯಲ್ಲವೇ! ಹಾಗಾದ್ರೆ ಮುಂದೆ ಓದಿ….

ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ  ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು. ವಿನತೆಗೆ ಅರುಣ ಮತ್ತು ಗರುಡ ಎಂಬ ಮಕ್ಕಳಾದವು. ಅರುಣನು ಸೂರ್ಯನ ಸಾರಥಿಯದನು. ಗರುಡನು ಮಹಾಶಕ್ತಿಶಾಲಿಯಾಗಿ ಬೆಳೆದನು. ವಿನತೆಯ ಮಗನಾದ್ದರಿಂದ ಗರುಡನಿಗೆ ವೈನತೆಯ ಎಂದೂ ಹೆಸರಿದೆ.

ಹೀಗಿರುವಾಗ ದೇವತೆಗಳು ರಾಕ್ಷಸರು ಅಮೃತಕ್ಕಾಗಿ ಕ್ಷೀರಸಾಗರವನ್ನು ಕಡೆದರು . ಆಗ ಕ್ಷೀರಸಾಗರದಿಂದ ಉದ್ಬವವಾದ ಅನೇಕ ವಸ್ತುಗಳಲ್ಲಿ ಉಚ್ಚೈಶ್ರವನ್ನು ಎಂಬ ಕುದುರೆಯೂ ಒಂದು. ಆ ಕುದುರೆಯೂ ಹಾಲಿನಂತೆ ಬೆಳ್ಳಗಿತ್ತು. ಅತ್ಯಾಕರ್ಷವಾಗಿತ್ತು. ಅದನ್ನು ನೋಡುವ ಸಲುವಾಗಿ ಮೂರು ಲೋಕದಿಂದಲೂ ಜೀವಿಗಳು ಬರುತ್ತಿದ್ದರು.

ಕದ್ರು ಮತ್ತು ವಿನಯತೆಯರಿಗೂ ಆ ಕುದರೆಯನ್ನು ಕಾಣುವ ತವಕ ಉಂಟಾಯಿತು. ಆ ಕುದುರೆ ಹೇಗಿದೆಯೂ ಎಂದು ಅವರಿಬ್ಬರೇ ಚರ್ಚಿಸಿದರು. ವಿನತೆಯು ‘’ಕುದುರೆ ಪೂರ್ತಿ ಬೆಳ್ಳಗಿದೆಯಂತೆ. ಒಂದೇ ಒಂದು ಕಪ್ಪು ಚುಕ್ಕೆಯು ಇಲ್ಲವಂತೆ’’ – ಎಂದಳು. ಕದ್ರುವು, ‘’ ಅದು ಹೇಗೆ ಸಾಧ್ಯ ? ಇನ್ನೇನು ಇಲ್ಲದಿದ್ದರೂ ಅದರ ಬಾಲವಾದರು ಕಪ್ಪಗಿರಬೇಕಲ್ಲವೇ ?’’ – ಎಂದಳು. ವಿನತೆ ‘’ಇಲ್ಲ ಬಾಲವೂ ಬೆಳ್ಳಗಿದೆಯಂತೆ’’ ಎಂದಳು. ಕದ್ರು ‘’ಸಾಧ್ಯವೇ ಇಲ್ಲ, ಬೇಕಾದರೆ ಪಂದ್ಯ ಕಟ್ಟೋಣ’’ – ಎಂದಳು. ‘’ಏನು ಪಂದ್ಯ ?’’ – ಎಂದಾಗ ‘’ಕುದುರೆಯೂ ಪೂರ್ತಿ ಬೆಳ್ಳಗಿದ್ದರೆ, ಜೀವನಪೂರ್ತಿಯಾಗಿ ನಾನು ನಿನ್ನ ಸೇವಕಿಯಗಿರುತ್ತೇನೆ. ಕುದುರೆಯೂ ಬಾಲ ಕಪ್ಪಾಗಿದ್ದರೆ ನೀನು ನನ್ನ ಸೇವಕಿಯಗಿರಬೇಕು ‘’ ಎಂದಳು. ವಿನತೆ ಇದಕ್ಕೆ ಒಪ್ಪಿದಳು. ಇಬ್ಬರೂ ಕುದುರೆಯನ್ನು ನೋಡಿ ಬರುವುದೆಂದು ನಿಶ್ಚಯಿಸಿದರು.

ವಿನೋದವಾಗಿ ಶುರುವಾದ ಮಾತು ತುಂಬ ದೊಡ್ಡದಾಗಿ ಹೋಯಿತು ಕದ್ರುವಿಗೂ ಕುದುರೆಯೂ ಬಾಲ ಕಪ್ಪಾಗಿದೆ ಎಂದು ನಂಬಿಕೆಯಿಲ್ಲ. ಎಲ್ಲರೂ ಕುದುರೆಯೂ  ಪೂರ್ಣ ಬೆಳ್ಳಗಿದೆ ಎನ್ನುತ್ತಿದ್ದಾರೆ. ಆದರೆ ಯಾವುದೋ ಭಂಡ ಧೈರ್ಯದಿಂದ ಪಂದ್ಯ ಕಟ್ಟಿದ್ದಳು ಈಗ ಹೇಗಾದರೂ ಮಾಡಿ ಫಂದ್ಯದಲ್ಲಿ ಬೇಕೆಂದು ಯೋಚಿಸಿದಳು. ತನ್ನ ಮಕ್ಕಳಾದ ಸರ್ಪಗಳನ್ನು ಕರೆದಳು ಶೇಷ, ವಾಸುಕಿ, ತಕ್ಷಕ, ಕಾರ್ಕೋಟಕ ಮೊದಲಾದ ಸರ್ಪಗಳು ತಾಯಿಯ ಬಳಿಗೆ ಬಂದವು. ಕದ್ರುವು ತನಗೂ ವಿನತೆಗೂ ನಡೆದ ಮಾತುಕತೆಗಳನ್ನು ವಿವರಿಸಿದಳು ‘’ನೀವೆಲ್ಲರೂ ಹೋಗಿ ಆ ಕುದುರೆಯ ಬಾಲವನ್ನು ನಿಮ್ಮ ಶರೀರದಿಂದ ಮುಚ್ಚಿಬಿಡಿ. ಅದು ಕಪ್ಪಾಗಿ ಕಾಣುತ್ತದೆ. ನಾನು ಪಂದ್ಯದಲ್ಲಿ ಗೆದ್ದಂತಾಗುತ್ತದೆ’’ – ಎಂದಳು.

ಸರ್ಪಗಳು ‘’ಅಮ್ಮಾ ! ನಾವು ಈ ರೀತಿ ಮೋಸ ಮಾಡುವುದು ತಪ್ಪಲ್ಲವೇ ?’’ ಎಂದೂ ಕೇಳಿದವು. ಕದ್ರುವು ಕೂಪಗೊಂಡವು ‘’ನನ್ನ ಮಾತಿಗೆ ಎದುರುತ್ತರ ನೀಡುವಿರಾ ? ನನ್ನ ಮಾತಿಗೆ ಎದುರುತ್ತದೆ ನೀಡುವಿರಾ ? ನನ್ನ ಮಾತು ಮೀರಿದರೂ ಅಗ್ನಿಕುಂಡದಲ್ಲಿ ಬಿದ್ದು ಸಾಯುವಂತಾಗಲಿ’’ – ಎಂದು ಶಾಪ ಕೊಟ್ಟಳು. ಸರ್ಪಗಳು ದುಃಖ – ಭಯಗಳಿಂದ ತಾಯಿಯು ಹೇಳಿದಂತೆ ಉಚ್ಚೈಶ್ರವಸ್ಸಿನ ಬಾಲವನ್ನು ಹಿಡಿದುಕೊಂಡವು. ಅನಂತರ ಕದ್ರು ಮತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯ ಬಾಲವೂ ಮಾತ್ರ ಕಪ್ಪಾಗಿತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯೂ ಬಾಲವೂ ಮಾತ್ರ ಕಪ್ಪಾಗಿತ್ತು. ವಿನತೆಯು ತನ್ನ ಸೋಲನೋಪ್ಪಿಕೊಂಡು ಕದ್ರುವಿನ  ಸೇವಕಿಯಾದಳು. ಇಲ್ಲಿ ಓದಿ:-ಆ ದಿನ ಈ ಯಾಗವೇನಾದರೂ ನಡೆದಿದ್ದರೆ, ಸರ್ಪಗಳ ವಂಶವೇ ಇರುತ್ತಿರಲಿಲ್ಲ..!

ಹೀಗೆ ವಿನತೆಯು ಕದ್ರುವಿನ  ಸೇವಕಿಯದ್ದರಿಂದ ವಿನತೆಯು ಮಗನಾದ ಗರುಡನು ಸಹ ಕದ್ರು ಮತ್ತು ಅವಳ ಮಕ್ಕಳು ಹೇಳಿದಂತೆ ಮದುತ್ತಿರಬೇಕಾಯಿತು. ಸರ್ಪಗಳ ಗರುಡನನ್ನು ತಮ್ಮ ಸೇವಕನಂತೆ ಹಿನಾಯವಾಗಿ ನಡೆಸಿಕೊಳ್ಳಲಾರಂಬಿಸಿದವು. ಇದರಿಂದ ಗರುಡನ ಮನಸ್ಸಿಗೆ ಬಹಳ ದುಃಖವಾಯಿತು. ಹೇಗಾದರೂ ಮಾಡಿ ತನ್ನ ಮತ್ತು ತನ್ನ ತಾಯಿಯ ದಾಸ್ಯವನ್ನು   ಹೋಗಲಾಡಿಸಬೇಕು ಎಂದು ಅವನು ಯೋಚಿಸಿದನು.

ಗರುಡನು ಸರ್ಪಗಳ ಬಳಿಗೆ ಹೋಗಿ ‘’ಅಯ್ಯಾ ! ನಾನು ನಿಮಗೆ ಏನ್ ಏನು ಕೆಲಸವನ್ನು ಮಾಡಿಕೊಟ್ಟರೆ ನಮ್ಮ ತಾಯಿಯ ದಾಸ್ಯವು ಹೋಗುತ್ತದೆ ತಿಳಿಸಿ’’  ಎಂದು ಕೇಳಿದನು. ಅದಕ್ಕೆ ಸರ್ಪಗಳ ತಮ್ಮ ತಾಯಿಯಿಂದ ತಮಗೆ ಬಂದ ಶಾಪವನ್ನು ನೆನೆಪಿಸಿಕೊಂಡು ‘’ ದೇವಲೋಕದಿಂದ ಅಮೃತವನ್ನು ತಂದದುಕೊಟ್ಟರೆ ನಿಮ್ಮ ಭಂಧವಿಮೊಚನೆಯಾಗುವುದು’’ – ಎಂದು ತಿಳಿಸಿದವು.

ಕೂಡಲೇ  ಗರುಡನು ಆಕಾಶಕ್ಕೆ ಚಿಮ್ಮ್ಕಿದನು. ತನ್ನ ವಿಶಾಲವಾದ ರೆಕ್ಕೆಗಳನ್ನು ಪಟಪಟನೆ ಬಡಿಯುತ್ತ ವಯುವೆಗದಿಂದ ದೇವಲೋಕದ ಕಡೆ ಹಾರಿದನು. ಅವನು ಹಾರಿದ ರಭಸಕ್ಕೆ ದೊಡ್ಡ ದೊಡ್ಡ ವೃಕ್ಷಗಳು ಬಿದ್ದುಹೊದವು. ಪರ್ವತಗಳು ಅಲ್ಲಾಡಿ ಹೋದವು. ಅಂತಹ ವೇಗದಿಂದ ಗರುಡನು ದೇವಲೋಕಕ್ಕೆ ಬಂದನು.

ಗರುಡನು ಅಮೃತವನ್ನು ಕೊಂಡೊಯ್ಯಲು ಬರುತ್ತಿರುವನೆಂದು ತಿಳಿದ ದೇವೆಂದ್ರನು ಸೈನ್ಯವು  ಗರುಡನ ಮೇಲೆ ಎರಗಿತು. ಆದರೆ ಗರುಡನು ಒಂದೇ ಕ್ಷಣದಲ್ಲಿ ಆ ಸೈನ್ಯದ ಧಾಳಿಯನ್ನು ನಿವರಿಸಿಕೊಂಡನು. ದೇವಲೋಕದ ಅಮೃತದ ಕುಂಭವನ್ನು ತೆಗೆದುಕೊಂಡು ಹೋಗಿ ಸರ್ಪಗಳ ಮುಂದಿಟ್ಟನು. ಹೀಗೆ ಸರ್ಪಗಳ ಕೋರಿಕೆಯನ್ನು ಈಡೇರಿಸಿ ಅವನು ತನ್ನ ತಾಯಿ ವಿನತೆಯ ದಾಸ್ಯವನ್ನು ಹೋಗಲಾಡಿಸಿದನು.

ಅಮೃತಕುಂಭವನ್ನು ತರುವ ಸಮಯದಲ್ಲಿ ಗರುಡನು ಪ್ರದರ್ಶಿಸಿದ ವಾಯುವೆಗವನ್ನು ಕಂಡು ಮಹಾವಿಷ್ಣುವಿಗೆ ಬಹಳ ಆನಂದವಾಯಿತು. ಅವನು ಗರುಡನನ್ನು ಕುರಿತು ‘’ಅಯ್ಯಾ ! ನೀನು ನನ್ನ ವಾಹನವಾಗಿರು’’ ಎಂದು ಕೇಳಿಕೊಂಡನು. ಗರುಡನು ಅದಕ್ಕೆ ಸಂತೋಷದಿಂದ ಒಪ್ಪಿಕೊಂಡನು. ಹೀಗೆ ಗರುಡನು ವಿಷ್ಣುವಾಹನನಾದನು.

ಸರ್ಪಗಳೆನೋ ಕದ್ರುವು ಹೇಳಿದಂತೆ ಕುದುರೆಯ ಬಾಲವನ್ನು ಹಿಡಿದು ಪಂದ್ಯದಲ್ಲಿ ಅವಳನ್ನು ಗೆಲ್ಲಿಸಿದುವು. ಆದರೆ ಅವಳು ಆ ಮುಂಚೆ ಅವರಿಗೆ ಕೊಟ್ಟಿದ್ದ ಶಾಪ ಮಾತ್ರ ಹಾಗೆಯೇ ಇತ್ತಲ್ಲ. ಆ ಶಪದಿಂದಾಗುವ ದುಷ್ಪರಿಣಾಮವನ್ನು ತಪ್ಪಿಸಿಕೊಳ್ಳುವುದು ಹೇಗೆಂದು ಅವರೆಲ್ಲ ಯೋಚಿಸಿದರು. ಗರುಡನೇನೋ ಅವರಿಗೆ ಅಮೃತವನ್ನು ತಂದುಕೊಟ್ಟಿದ್ದನು. ಆದರೆ ಇಂದ್ರನು ಅಪಹರಿಸಿಕೊಂಡು ಹೋದುದರಿಂದ ಅವರಿಗೆ ಅದು ದಕ್ಕಿರಲಿಲ್ಲ.

ಆಗ ಏಳಪತ್ರನೆಂಬ ಸರ್ಪವು ‘’ನಾವು ಈಗಲೇ ಸೂಕ್ತವಾದ ಸಂಬಂಧವನ್ನು ಹುಡುಕಿ, ನಮ್ಮ ತಂಗಿ ಜರತ್ಕ್ರಾರುವಿನ ಮದುವೆಯನ್ನು ಮಾಡಿಬಿಡೊಣ. ಅವಳ ಹೊಟ್ಟೆಯಲ್ಲಿ ಹುಟ್ಟುವ ಮಗನು ಬೇರೆ ವಂಶಕ್ಕೆ ಸೇರುವುದರಿಂದ, ಅವನಿಗೆ ನಮ್ಮ ತಾಯಿಯ ಶಾಪದ ಭೀತಿ ಇರುವುದಿಲ್ಲ. ಅವನು ಯಾವುದಾದರೂ ಯೋಜನೆಯಿಂದ ನಮಗೊದಗಿರುವ ದುರವಸ್ತೆಯನ್ನು ತಪ್ಪಿಸಲು ಯತ್ನಿಸಬಹುದು’’- ಎಂದನು ಸರ್ಪಗಳ ಜರತ್ಕಾರವನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಿದರು. ಮುಂದೆ ಜರತ್ಕಾರು ಅಸ್ತೀಕ ಎಂಬ ಮಗನಿಗೆ ಜನ್ಮ ಕೊಟ್ಟಳು. ಆಸ್ತಿಕನು ಸಕಲ ವಿದ್ಯಾಪಾರಂಗತನಾಗಿ ಬೆಳೆದನು’’

ಉಗ್ರಶ್ರವ ಸೌತಿಗಳು ಇಷ್ಟು ಕಥೆಯನ್ನು ಹೇಳಿ ಮತ್ತೆ ಜನಮೇಜಯ  ಸರ್ಪಯಾಗದ ಬಗ್ಗೆ ಹೇಳಲಾರಂಭಿಸಿದರು.

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಜ್ಯೋತಿಷ್ಯ

    ವಿಜ್ಞ ನಿವಾರಕ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…