ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಪಗಳ ತಾಯಿ ಯಾರೂ? ಅವಳು ತನ್ನ ಮಕ್ಕಳಿಗೆ ಶಾಪ ಕೊಡಲು ಕಾರಣವೇನು ? ಇವೆಲ್ಲದರ ಬಗ್ಗೆ ತಿಳಿಯುವ ಕುತೂಹಲ ಇದೆಯಲ್ಲವೇ! ಹಾಗಾದ್ರೆ ಮುಂದೆ ಓದಿ….
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು. ವಿನತೆಗೆ ಅರುಣ ಮತ್ತು ಗರುಡ ಎಂಬ ಮಕ್ಕಳಾದವು. ಅರುಣನು ಸೂರ್ಯನ ಸಾರಥಿಯದನು. ಗರುಡನು ಮಹಾಶಕ್ತಿಶಾಲಿಯಾಗಿ ಬೆಳೆದನು. ವಿನತೆಯ ಮಗನಾದ್ದರಿಂದ ಗರುಡನಿಗೆ ವೈನತೆಯ ಎಂದೂ ಹೆಸರಿದೆ.
ಹೀಗಿರುವಾಗ ದೇವತೆಗಳು ರಾಕ್ಷಸರು ಅಮೃತಕ್ಕಾಗಿ ಕ್ಷೀರಸಾಗರವನ್ನು ಕಡೆದರು . ಆಗ ಕ್ಷೀರಸಾಗರದಿಂದ ಉದ್ಬವವಾದ ಅನೇಕ ವಸ್ತುಗಳಲ್ಲಿ ಉಚ್ಚೈಶ್ರವನ್ನು ಎಂಬ ಕುದುರೆಯೂ ಒಂದು. ಆ ಕುದುರೆಯೂ ಹಾಲಿನಂತೆ ಬೆಳ್ಳಗಿತ್ತು. ಅತ್ಯಾಕರ್ಷವಾಗಿತ್ತು. ಅದನ್ನು ನೋಡುವ ಸಲುವಾಗಿ ಮೂರು ಲೋಕದಿಂದಲೂ ಜೀವಿಗಳು ಬರುತ್ತಿದ್ದರು.
ಕದ್ರು ಮತ್ತು ವಿನಯತೆಯರಿಗೂ ಆ ಕುದರೆಯನ್ನು ಕಾಣುವ ತವಕ ಉಂಟಾಯಿತು. ಆ ಕುದುರೆ ಹೇಗಿದೆಯೂ ಎಂದು ಅವರಿಬ್ಬರೇ ಚರ್ಚಿಸಿದರು. ವಿನತೆಯು ‘’ಕುದುರೆ ಪೂರ್ತಿ ಬೆಳ್ಳಗಿದೆಯಂತೆ. ಒಂದೇ ಒಂದು ಕಪ್ಪು ಚುಕ್ಕೆಯು ಇಲ್ಲವಂತೆ’’ – ಎಂದಳು. ಕದ್ರುವು, ‘’ ಅದು ಹೇಗೆ ಸಾಧ್ಯ ? ಇನ್ನೇನು ಇಲ್ಲದಿದ್ದರೂ ಅದರ ಬಾಲವಾದರು ಕಪ್ಪಗಿರಬೇಕಲ್ಲವೇ ?’’ – ಎಂದಳು. ವಿನತೆ ‘’ಇಲ್ಲ ಬಾಲವೂ ಬೆಳ್ಳಗಿದೆಯಂತೆ’’ ಎಂದಳು. ಕದ್ರು ‘’ಸಾಧ್ಯವೇ ಇಲ್ಲ, ಬೇಕಾದರೆ ಪಂದ್ಯ ಕಟ್ಟೋಣ’’ – ಎಂದಳು. ‘’ಏನು ಪಂದ್ಯ ?’’ – ಎಂದಾಗ ‘’ಕುದುರೆಯೂ ಪೂರ್ತಿ ಬೆಳ್ಳಗಿದ್ದರೆ, ಜೀವನಪೂರ್ತಿಯಾಗಿ ನಾನು ನಿನ್ನ ಸೇವಕಿಯಗಿರುತ್ತೇನೆ. ಕುದುರೆಯೂ ಬಾಲ ಕಪ್ಪಾಗಿದ್ದರೆ ನೀನು ನನ್ನ ಸೇವಕಿಯಗಿರಬೇಕು ‘’ ಎಂದಳು. ವಿನತೆ ಇದಕ್ಕೆ ಒಪ್ಪಿದಳು. ಇಬ್ಬರೂ ಕುದುರೆಯನ್ನು ನೋಡಿ ಬರುವುದೆಂದು ನಿಶ್ಚಯಿಸಿದರು.
ವಿನೋದವಾಗಿ ಶುರುವಾದ ಮಾತು ತುಂಬ ದೊಡ್ಡದಾಗಿ ಹೋಯಿತು ಕದ್ರುವಿಗೂ ಕುದುರೆಯೂ ಬಾಲ ಕಪ್ಪಾಗಿದೆ ಎಂದು ನಂಬಿಕೆಯಿಲ್ಲ. ಎಲ್ಲರೂ ಕುದುರೆಯೂ ಪೂರ್ಣ ಬೆಳ್ಳಗಿದೆ ಎನ್ನುತ್ತಿದ್ದಾರೆ. ಆದರೆ ಯಾವುದೋ ಭಂಡ ಧೈರ್ಯದಿಂದ ಪಂದ್ಯ ಕಟ್ಟಿದ್ದಳು ಈಗ ಹೇಗಾದರೂ ಮಾಡಿ ಫಂದ್ಯದಲ್ಲಿ ಬೇಕೆಂದು ಯೋಚಿಸಿದಳು. ತನ್ನ ಮಕ್ಕಳಾದ ಸರ್ಪಗಳನ್ನು ಕರೆದಳು ಶೇಷ, ವಾಸುಕಿ, ತಕ್ಷಕ, ಕಾರ್ಕೋಟಕ ಮೊದಲಾದ ಸರ್ಪಗಳು ತಾಯಿಯ ಬಳಿಗೆ ಬಂದವು. ಕದ್ರುವು ತನಗೂ ವಿನತೆಗೂ ನಡೆದ ಮಾತುಕತೆಗಳನ್ನು ವಿವರಿಸಿದಳು ‘’ನೀವೆಲ್ಲರೂ ಹೋಗಿ ಆ ಕುದುರೆಯ ಬಾಲವನ್ನು ನಿಮ್ಮ ಶರೀರದಿಂದ ಮುಚ್ಚಿಬಿಡಿ. ಅದು ಕಪ್ಪಾಗಿ ಕಾಣುತ್ತದೆ. ನಾನು ಪಂದ್ಯದಲ್ಲಿ ಗೆದ್ದಂತಾಗುತ್ತದೆ’’ – ಎಂದಳು.
ಸರ್ಪಗಳು ‘’ಅಮ್ಮಾ ! ನಾವು ಈ ರೀತಿ ಮೋಸ ಮಾಡುವುದು ತಪ್ಪಲ್ಲವೇ ?’’ ಎಂದೂ ಕೇಳಿದವು. ಕದ್ರುವು ಕೂಪಗೊಂಡವು ‘’ನನ್ನ ಮಾತಿಗೆ ಎದುರುತ್ತರ ನೀಡುವಿರಾ ? ನನ್ನ ಮಾತಿಗೆ ಎದುರುತ್ತದೆ ನೀಡುವಿರಾ ? ನನ್ನ ಮಾತು ಮೀರಿದರೂ ಅಗ್ನಿಕುಂಡದಲ್ಲಿ ಬಿದ್ದು ಸಾಯುವಂತಾಗಲಿ’’ – ಎಂದು ಶಾಪ ಕೊಟ್ಟಳು. ಸರ್ಪಗಳು ದುಃಖ – ಭಯಗಳಿಂದ ತಾಯಿಯು ಹೇಳಿದಂತೆ ಉಚ್ಚೈಶ್ರವಸ್ಸಿನ ಬಾಲವನ್ನು ಹಿಡಿದುಕೊಂಡವು. ಅನಂತರ ಕದ್ರು ಮತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯ ಬಾಲವೂ ಮಾತ್ರ ಕಪ್ಪಾಗಿತ್ತು ವಿನತೆಯರು ಬಂದು ನೋಡಿದಾಗ ಆ ಕುದುರೆಯೂ ಬಾಲವೂ ಮಾತ್ರ ಕಪ್ಪಾಗಿತ್ತು. ವಿನತೆಯು ತನ್ನ ಸೋಲನೋಪ್ಪಿಕೊಂಡು ಕದ್ರುವಿನ ಸೇವಕಿಯಾದಳು. ಇಲ್ಲಿ ಓದಿ:-ಆ ದಿನ ಈ ಯಾಗವೇನಾದರೂ ನಡೆದಿದ್ದರೆ, ಸರ್ಪಗಳ ವಂಶವೇ ಇರುತ್ತಿರಲಿಲ್ಲ..!
ಹೀಗೆ ವಿನತೆಯು ಕದ್ರುವಿನ ಸೇವಕಿಯದ್ದರಿಂದ ವಿನತೆಯು ಮಗನಾದ ಗರುಡನು ಸಹ ಕದ್ರು ಮತ್ತು ಅವಳ ಮಕ್ಕಳು ಹೇಳಿದಂತೆ ಮದುತ್ತಿರಬೇಕಾಯಿತು. ಸರ್ಪಗಳ ಗರುಡನನ್ನು ತಮ್ಮ ಸೇವಕನಂತೆ ಹಿನಾಯವಾಗಿ ನಡೆಸಿಕೊಳ್ಳಲಾರಂಬಿಸಿದವು. ಇದರಿಂದ ಗರುಡನ ಮನಸ್ಸಿಗೆ ಬಹಳ ದುಃಖವಾಯಿತು. ಹೇಗಾದರೂ ಮಾಡಿ ತನ್ನ ಮತ್ತು ತನ್ನ ತಾಯಿಯ ದಾಸ್ಯವನ್ನು ಹೋಗಲಾಡಿಸಬೇಕು ಎಂದು ಅವನು ಯೋಚಿಸಿದನು.
ಗರುಡನು ಸರ್ಪಗಳ ಬಳಿಗೆ ಹೋಗಿ ‘’ಅಯ್ಯಾ ! ನಾನು ನಿಮಗೆ ಏನ್ ಏನು ಕೆಲಸವನ್ನು ಮಾಡಿಕೊಟ್ಟರೆ ನಮ್ಮ ತಾಯಿಯ ದಾಸ್ಯವು ಹೋಗುತ್ತದೆ ತಿಳಿಸಿ’’ ಎಂದು ಕೇಳಿದನು. ಅದಕ್ಕೆ ಸರ್ಪಗಳ ತಮ್ಮ ತಾಯಿಯಿಂದ ತಮಗೆ ಬಂದ ಶಾಪವನ್ನು ನೆನೆಪಿಸಿಕೊಂಡು ‘’ ದೇವಲೋಕದಿಂದ ಅಮೃತವನ್ನು ತಂದದುಕೊಟ್ಟರೆ ನಿಮ್ಮ ಭಂಧವಿಮೊಚನೆಯಾಗುವುದು’’ – ಎಂದು ತಿಳಿಸಿದವು.
ಕೂಡಲೇ ಗರುಡನು ಆಕಾಶಕ್ಕೆ ಚಿಮ್ಮ್ಕಿದನು. ತನ್ನ ವಿಶಾಲವಾದ ರೆಕ್ಕೆಗಳನ್ನು ಪಟಪಟನೆ ಬಡಿಯುತ್ತ ವಯುವೆಗದಿಂದ ದೇವಲೋಕದ ಕಡೆ ಹಾರಿದನು. ಅವನು ಹಾರಿದ ರಭಸಕ್ಕೆ ದೊಡ್ಡ ದೊಡ್ಡ ವೃಕ್ಷಗಳು ಬಿದ್ದುಹೊದವು. ಪರ್ವತಗಳು ಅಲ್ಲಾಡಿ ಹೋದವು. ಅಂತಹ ವೇಗದಿಂದ ಗರುಡನು ದೇವಲೋಕಕ್ಕೆ ಬಂದನು.
ಗರುಡನು ಅಮೃತವನ್ನು ಕೊಂಡೊಯ್ಯಲು ಬರುತ್ತಿರುವನೆಂದು ತಿಳಿದ ದೇವೆಂದ್ರನು ಸೈನ್ಯವು ಗರುಡನ ಮೇಲೆ ಎರಗಿತು. ಆದರೆ ಗರುಡನು ಒಂದೇ ಕ್ಷಣದಲ್ಲಿ ಆ ಸೈನ್ಯದ ಧಾಳಿಯನ್ನು ನಿವರಿಸಿಕೊಂಡನು. ದೇವಲೋಕದ ಅಮೃತದ ಕುಂಭವನ್ನು ತೆಗೆದುಕೊಂಡು ಹೋಗಿ ಸರ್ಪಗಳ ಮುಂದಿಟ್ಟನು. ಹೀಗೆ ಸರ್ಪಗಳ ಕೋರಿಕೆಯನ್ನು ಈಡೇರಿಸಿ ಅವನು ತನ್ನ ತಾಯಿ ವಿನತೆಯ ದಾಸ್ಯವನ್ನು ಹೋಗಲಾಡಿಸಿದನು.
ಅಮೃತಕುಂಭವನ್ನು ತರುವ ಸಮಯದಲ್ಲಿ ಗರುಡನು ಪ್ರದರ್ಶಿಸಿದ ವಾಯುವೆಗವನ್ನು ಕಂಡು ಮಹಾವಿಷ್ಣುವಿಗೆ ಬಹಳ ಆನಂದವಾಯಿತು. ಅವನು ಗರುಡನನ್ನು ಕುರಿತು ‘’ಅಯ್ಯಾ ! ನೀನು ನನ್ನ ವಾಹನವಾಗಿರು’’ ಎಂದು ಕೇಳಿಕೊಂಡನು. ಗರುಡನು ಅದಕ್ಕೆ ಸಂತೋಷದಿಂದ ಒಪ್ಪಿಕೊಂಡನು. ಹೀಗೆ ಗರುಡನು ವಿಷ್ಣುವಾಹನನಾದನು.
ಸರ್ಪಗಳೆನೋ ಕದ್ರುವು ಹೇಳಿದಂತೆ ಕುದುರೆಯ ಬಾಲವನ್ನು ಹಿಡಿದು ಪಂದ್ಯದಲ್ಲಿ ಅವಳನ್ನು ಗೆಲ್ಲಿಸಿದುವು. ಆದರೆ ಅವಳು ಆ ಮುಂಚೆ ಅವರಿಗೆ ಕೊಟ್ಟಿದ್ದ ಶಾಪ ಮಾತ್ರ ಹಾಗೆಯೇ ಇತ್ತಲ್ಲ. ಆ ಶಪದಿಂದಾಗುವ ದುಷ್ಪರಿಣಾಮವನ್ನು ತಪ್ಪಿಸಿಕೊಳ್ಳುವುದು ಹೇಗೆಂದು ಅವರೆಲ್ಲ ಯೋಚಿಸಿದರು. ಗರುಡನೇನೋ ಅವರಿಗೆ ಅಮೃತವನ್ನು ತಂದುಕೊಟ್ಟಿದ್ದನು. ಆದರೆ ಇಂದ್ರನು ಅಪಹರಿಸಿಕೊಂಡು ಹೋದುದರಿಂದ ಅವರಿಗೆ ಅದು ದಕ್ಕಿರಲಿಲ್ಲ.
ಆಗ ಏಳಪತ್ರನೆಂಬ ಸರ್ಪವು ‘’ನಾವು ಈಗಲೇ ಸೂಕ್ತವಾದ ಸಂಬಂಧವನ್ನು ಹುಡುಕಿ, ನಮ್ಮ ತಂಗಿ ಜರತ್ಕ್ರಾರುವಿನ ಮದುವೆಯನ್ನು ಮಾಡಿಬಿಡೊಣ. ಅವಳ ಹೊಟ್ಟೆಯಲ್ಲಿ ಹುಟ್ಟುವ ಮಗನು ಬೇರೆ ವಂಶಕ್ಕೆ ಸೇರುವುದರಿಂದ, ಅವನಿಗೆ ನಮ್ಮ ತಾಯಿಯ ಶಾಪದ ಭೀತಿ ಇರುವುದಿಲ್ಲ. ಅವನು ಯಾವುದಾದರೂ ಯೋಜನೆಯಿಂದ ನಮಗೊದಗಿರುವ ದುರವಸ್ತೆಯನ್ನು ತಪ್ಪಿಸಲು ಯತ್ನಿಸಬಹುದು’’- ಎಂದನು ಸರ್ಪಗಳ ಜರತ್ಕಾರವನ್ನು ಅನುರೂಪನಾದ ವರನಿಗೆ ಕೊಟ್ಟು ಮದುವೆ ಮಾಡಿದರು. ಮುಂದೆ ಜರತ್ಕಾರು ಅಸ್ತೀಕ ಎಂಬ ಮಗನಿಗೆ ಜನ್ಮ ಕೊಟ್ಟಳು. ಆಸ್ತಿಕನು ಸಕಲ ವಿದ್ಯಾಪಾರಂಗತನಾಗಿ ಬೆಳೆದನು’’
ಉಗ್ರಶ್ರವ ಸೌತಿಗಳು ಇಷ್ಟು ಕಥೆಯನ್ನು ಹೇಳಿ ಮತ್ತೆ ಜನಮೇಜಯ ಸರ್ಪಯಾಗದ ಬಗ್ಗೆ ಹೇಳಲಾರಂಭಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..